Homeಚಳವಳಿರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ...

- Advertisement -
- Advertisement -

ರಕ್ತವನ್ನು ಚೆಲ್ಲುತ್ತೇವೆ – ಒಳಮೀಸಲಾತಿ ಪಡೆಯುತ್ತೇವೆ, ಹಂಚಿ ತಿನ್ನುವುದು ಅಂಬೇಡ್ಕರ್ ವಾದ – ಕಿತ್ತು ತಿನ್ನುವುದು ಮನುವಾದ, ಸರ್ವರಿಗೂ ಸಮಪಾಲು -ಸರ್ವರಿಗೂ ಸಮಬಾಳು, ಮೀಸಲಾತಿ ವರ್ಗೀಕರಣ ಆಗಲೇಬೇಕು, ಸದಾಶಿವ ಆಯೋಗದ ವರದಿ ಚರ್ಚೆಯಾಗಲಿ ಮತ್ತು ಜಾರಿಯಾಗಲಿ.. ಜೈ ಮಾದಿಗ, ಜೈ ಜೈ ಮಾದಿಗ… ಇವು ಇಂದು ಬೆಂಗಳೂರಿನಲ್ಲಿ ಭೀಮಸಾಗರದಲ್ಲಿ ಮೊಳಗಿದ ಘೋಷಣೆಗಳು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಹೋರಾಟಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ  ಶೋಷಿತ ಸಮುದಾಯಗಳ ಜನಸಾಗರವೇ ಹರಿದುಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಸಮಾವೇಶಗೊಳ್ಳಲಾಯಿತು. ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್‌ರವರ ನೇತೃತ್ವದಲ್ಲಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತ್ಯಭೂಮಿಯಿಂದ ಪಾದಯಾತ್ರೆ ಹೊರಟಿದ್ದ ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಹೋರಾಟದ ಸಾಗರ ಸೇರಿಕೊಂಡರು.

ಅಂಬೇಡ್ಕರ್‌ರವರ ಹಾಡು ಹಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅಂಬಣ್ಣನವರು, “ನೊಂದ ಜನರು ಮೂರು ದಶಕದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಆದರೆ ಮೂರು ಪಕ್ಷಗಳು ಆಶ್ವಾಸನೆ ನೀಡಿದವು ಹೊರತು, ಜಾರಿ ಮಾಡಲಿಲ್ಲ. ಜಸ್ಟೀಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತು. ಬಿಜೆಪಿ ಸರ್ಕಾರ ಅದಕ್ಕೆ ಅನುದಾನ ನೀಡಿತು. ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿಕೊಂಡಿತು. ಆದರೆ ಯಾರೂ ಸಹ ವರದಿಯನ್ನು ಬಿಡುಗಡೆ ಮಾಡಲಿಲ್ಲ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಮತ್ತೊಂದು ಚುನಾವಣೆ ಬಂದಿದೆ. ನಿಮ್ಮ ಭರವಸೆಗಳು ಸಾಕು. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಹಾಗೂ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು. ಆಗ ನಾವು ವೋಟು ಯಾರಿಗಾಗಬೇಕೆಂದು ತೀರ್ಮಾನ ಮಾಡ್ತೀವಿ. ಇಲ್ಲದಿದ್ದರೆ ನೋಟಾ ಒತ್ತಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಹರಿಹರದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಮಾದಿಗ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿ ಬಂದು ನಮ್ಮನ್ನು ಸಮಾಧಾನ ಮಾಡಿದರೆ ಪ್ರಯೋಜನವಾಗದು. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು. ಆ ಕುರಿತು ಚರ್ಚೆ ನಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ನೊಂದ ಜನರಿಗೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದರು.

ಆರ್ ಮೋಹನ್‌ರಾಜ್‌ರವರು ಮಾತನಾಡಿ, “ಬಾಬಾಸಾಹೇಬರ ಆಶಯ ಸಾಮಾಜಿಕ ನ್ಯಾಯ. ಶೋಷಣೆಗೆ ಒಳಗಾದವರಿಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿಗಬೇಕು ಎಂಬುದಾಗಿದೆ. ಆದರೆ ಮೂರು ಪರ್ಸೆಂಟ್ ಇರುವ ಜನರಿಗೆ 10% ಇಡಬ್ಲೂಎಸ್ ಮೀಸಲಾತಿಯನ್ನು ಏಕಾಏಕಿ ಜಾರಿಗೊಳಿಸಲಾಗಿದೆ. 25 % ಇರುವ ನಾವು ಹಂಚಿಕೊಳ್ಳುತ್ತೇವೆ, ಮೀಸಲಾತಿ ವರ್ಗೀಕರಣ ಮಾಡಿ ಎಂದರೆ ಮೀನಾಮೇಷ ಎಣಿಸಲಾಗುತ್ತಿದೆ” ಎಂದು ಕಿಡಿಕಾರಿದರು.

ಸರ್ಕಾರದ ಒಡೆದು ಆಳುವ ನೀತಿಗೆ ವಿರುದ್ಧವಾಗಿ ನಮ್ಮ ಹೋರಾಟ ನಡೆಯುತ್ತಿದೆ. ಮೀಸಲಾತಿ ವರ್ಗೀಕರಣದ ಮೂಲಕ ಅನ್ಯಾಯವಾದ ಸಮುದಾಯಕ್ಕೆ ಸಮಪಾಲು ದಕ್ಕಬೇಕು. ಒಳ ಮೀಸಲಾತಿಗಾಗಿ ರಾಜಕೀಯ ಪಕ್ಷಗಳು ಸಬ್‌ ಕಮಿಟಿ ರಚಿಸುವುದು ನಮಗೆ ಬೇಕಾಗಿಲ್ಲ. ಬದಲಾಗಿ ಮುಂಬರುವ ಅಧಿವೇಶನದಲ್ಲಿ ಘೋಷಣೆ ಮಾಡಬೇಕು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಬೇಕು. ಸುಳ್ಳು ಜಾತಿ ಪತ್ರ ಪಡೆದವರಿಗೆ ಕಠಿಣ ಶಿಕ್ಷೆಯಾಗಬೇಕು, ಪಿಟಿಸಿಎಲ್ ಕಾಯ್ದೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಶಾಸಕರು, ಸಂಸದರು, ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹರಿದಿರುವ ಚಡ್ಡಿ ಹೊತ್ತು ಓಡಾಡುವುದನ್ನು ನಿಲ್ಲಿಸಿ… ನಮ್ಮ ನ್ಯಾಯಯುತ ಪಾಲು ಪಡೆಯಲು ಹೋರಾಡಿ. ಇಲ್ಲದಿದ್ದರೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್ ಮಾರಪ್ಪನವರು, ವೆಂಕಟಗಿರಿಯಯ್ಯನವರು, ಬಿ.ಆರ್ ಭಾಸ್ಕರ್ ಪ್ರಸಾದ್, ಬಸವರಾಜ್ ಕೌತಾಳ್, ದಾನಪ್ಪ ಸಿ ನೀಲೋಗಲ್, ಎಂ.ಆರ್ ಭೇರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಗೋ ಬ್ಯಾಕ್ ಸೋಮಣ್ಣ ಎಂದ ಪ್ರತಿಭಟನಾಕಾರರು

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.  ವೇದಿಕೆಯ ಹಿಂಭಾಗಕ್ಕೆ ಆಗಮಿಸಿದ ಅವರನ್ನು ವೇದಿಕೆಯ ಬಳಿ ಹೋಗಲು ಬಿಡದೆ ಪ್ರತಿಭಟನಾಕಾರರು ತಡೆದರು. ನೀವೇಕೆ ಬಂದೀರಿ? ನೀವು ನಮಗಾಗಿ ಏನು ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕರೆದುಕೊಂಡು ಬನ್ನಿ ಎಂದು ತಾಕೀತು ಮಾಡಿದರು. ಸುಮಾರು 15 ನಿಮಿಷ ಕಾದ ನಂತರ ಸೋಮಣ್ಣ ಪೊಲೀಸರ ಸಹಾಯದೊಂದಿಗೆ ಜನರ ವಿರೋಧದ ನಡುವೆಯೂ ವೇದಿಕೆ ಏರಿದರು. ಆದರೆ ಜನರು ಗೋ ಬ್ಯಾಕ್ ಸೋಮಣ್ಣ, ಸಿಎಂ ಬೊಮ್ಮಾಯಿ ಬರಲೇಬೇಕು ಎಂದು ಜೋರಾಗಿ ಘೋಷಣೆ ಕೂಗಿದರು. ಸೋಮಣ್ಣನವರು ಮಾತನಾಡಲು ಬಿಡದೇ ಜನರು ಜೋರಾಗಿ ಘೋಷಣೆ ಕೂಗುತ್ತಲೇ ಇದ್ದರು. ಕಡೆಗೆ ಸಚಿವ ಸೋಮಣ್ಣ ದಾರಿಕಾಣದೆ ವೇದಿಕೆ ಇಳಿದು ವಾಪಸ್ ಹೋದರು.

ಇದನ್ನೂ ಓದಿ; ಒಳಮೀಸಲಾತಿಯೇ ಸಾಮಾಜಿಕ ನ್ಯಾಯವಾಗುವ ಜಾಯಮಾನದಲ್ಲಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...