Homeಚಳವಳಿರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ರಕ್ತವನ್ನು ಚೆಲ್ಲುತ್ತೇವೆ, ಒಳಮೀಸಲಾತಿ ಪಡೆಯುತ್ತೇವೆ: ಬೆಂಗಳೂರಿನಲ್ಲಿ ಭೀಮಸೈನಿಕರ ಘರ್ಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ...

- Advertisement -
- Advertisement -

ರಕ್ತವನ್ನು ಚೆಲ್ಲುತ್ತೇವೆ – ಒಳಮೀಸಲಾತಿ ಪಡೆಯುತ್ತೇವೆ, ಹಂಚಿ ತಿನ್ನುವುದು ಅಂಬೇಡ್ಕರ್ ವಾದ – ಕಿತ್ತು ತಿನ್ನುವುದು ಮನುವಾದ, ಸರ್ವರಿಗೂ ಸಮಪಾಲು -ಸರ್ವರಿಗೂ ಸಮಬಾಳು, ಮೀಸಲಾತಿ ವರ್ಗೀಕರಣ ಆಗಲೇಬೇಕು, ಸದಾಶಿವ ಆಯೋಗದ ವರದಿ ಚರ್ಚೆಯಾಗಲಿ ಮತ್ತು ಜಾರಿಯಾಗಲಿ.. ಜೈ ಮಾದಿಗ, ಜೈ ಜೈ ಮಾದಿಗ… ಇವು ಇಂದು ಬೆಂಗಳೂರಿನಲ್ಲಿ ಭೀಮಸಾಗರದಲ್ಲಿ ಮೊಳಗಿದ ಘೋಷಣೆಗಳು.

‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಯಾಗಲಿ ಹೋರಾಟಕ್ಕೆ ರಾಜ್ಯದ ಮೂಲೆ-ಮೂಲೆಗಳಿಂದ  ಶೋಷಿತ ಸಮುದಾಯಗಳ ಜನಸಾಗರವೇ ಹರಿದುಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ ಹರಿಯಿತು. ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೆ ಹಾಡುತ್ತ, ಕುಣಿಯುತ್ತ, ಘೋಷಣೆ ಕೂಗುತ್ತಾ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕ್ ಎದುರಿನ ರಸ್ತೆಯಲ್ಲಿ ಸಮಾವೇಶಗೊಳ್ಳಲಾಯಿತು. ಹಿರಿಯ ಹೋರಾಟಗಾರ ಅಂಬಣ್ಣ ಅರೋಲಿಕರ್‌ರವರ ನೇತೃತ್ವದಲ್ಲಿ ನವೆಂಬರ್ 28ರಿಂದ ಹರಿಹರದಲ್ಲಿರುವ ದಸಸಂ ಸಂಸ್ಥಾಪಕರಾದ ಬಿ.ಕೃಷ್ಣಪ್ಪನವರ ಚೈತ್ಯಭೂಮಿಯಿಂದ ಪಾದಯಾತ್ರೆ ಹೊರಟಿದ್ದ ನೂರಕ್ಕೂ ಹೆಚ್ಚು ಪಾದಯಾತ್ರಿಗಳು ಹೋರಾಟದ ಸಾಗರ ಸೇರಿಕೊಂಡರು.

ಅಂಬೇಡ್ಕರ್‌ರವರ ಹಾಡು ಹಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅಂಬಣ್ಣನವರು, “ನೊಂದ ಜನರು ಮೂರು ದಶಕದಿಂದ ಒಳಮೀಸಲಾತಿಗಾಗಿ ಹೋರಾಡುತ್ತಿದ್ದಾರೆ. ಆದರೆ ಮೂರು ಪಕ್ಷಗಳು ಆಶ್ವಾಸನೆ ನೀಡಿದವು ಹೊರತು, ಜಾರಿ ಮಾಡಲಿಲ್ಲ. ಜಸ್ಟೀಸ್ ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತು. ಬಿಜೆಪಿ ಸರ್ಕಾರ ಅದಕ್ಕೆ ಅನುದಾನ ನೀಡಿತು. ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿಕೊಂಡಿತು. ಆದರೆ ಯಾರೂ ಸಹ ವರದಿಯನ್ನು ಬಿಡುಗಡೆ ಮಾಡಲಿಲ್ಲ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಮತ್ತೊಂದು ಚುನಾವಣೆ ಬಂದಿದೆ. ನಿಮ್ಮ ಭರವಸೆಗಳು ಸಾಕು. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಹಾಗೂ ಕೇಂದ್ರ ಸರ್ಕಾರವು ಸಂವಿಧಾನದ ಅನುಚ್ಛೇದ 341(3)ಕ್ಕೆ ತಿದ್ದುಪಡಿ ತರಬೇಕು. ಆಗ ನಾವು ವೋಟು ಯಾರಿಗಾಗಬೇಕೆಂದು ತೀರ್ಮಾನ ಮಾಡ್ತೀವಿ. ಇಲ್ಲದಿದ್ದರೆ ನೋಟಾ ಒತ್ತಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದು ನಮ್ಮ ಹಕ್ಕೊತ್ತಾಯ ಆಲಿಸುವವರೆಗೂ ನಾವು ಮನೆಗಳಿಗೆ ಹೋಗುವುದಿಲ್ಲ. ಡಿಸೆಂಬರ್ 28ರವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ಹರಿಹರದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿರುವ ಮಾದಿಗ ರಕ್ಷಣಾ ವೇದಿಕೆ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕರಿಯಪ್ಪ ಗುಡಿಮನಿಯವರು ಮಾತನಾಡಿ, “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಲ್ಲಿ ಬಂದು ನಮ್ಮನ್ನು ಸಮಾಧಾನ ಮಾಡಿದರೆ ಪ್ರಯೋಜನವಾಗದು. ವಿಧಾನಸೌಧದಲ್ಲಿ ಕೊಳೆಯುತ್ತಿರುವ ಸದಾಶಿವ ಆಯೋಗದ ವರದಿಯ ಗಂಟು ಬಿಚ್ಚಬೇಕು. ಆ ಕುರಿತು ಚರ್ಚೆ ನಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ನೊಂದ ಜನರಿಗೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದರು.

ಆರ್ ಮೋಹನ್‌ರಾಜ್‌ರವರು ಮಾತನಾಡಿ, “ಬಾಬಾಸಾಹೇಬರ ಆಶಯ ಸಾಮಾಜಿಕ ನ್ಯಾಯ. ಶೋಷಣೆಗೆ ಒಳಗಾದವರಿಗೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿಗಬೇಕು ಎಂಬುದಾಗಿದೆ. ಆದರೆ ಮೂರು ಪರ್ಸೆಂಟ್ ಇರುವ ಜನರಿಗೆ 10% ಇಡಬ್ಲೂಎಸ್ ಮೀಸಲಾತಿಯನ್ನು ಏಕಾಏಕಿ ಜಾರಿಗೊಳಿಸಲಾಗಿದೆ. 25 % ಇರುವ ನಾವು ಹಂಚಿಕೊಳ್ಳುತ್ತೇವೆ, ಮೀಸಲಾತಿ ವರ್ಗೀಕರಣ ಮಾಡಿ ಎಂದರೆ ಮೀನಾಮೇಷ ಎಣಿಸಲಾಗುತ್ತಿದೆ” ಎಂದು ಕಿಡಿಕಾರಿದರು.

ಸರ್ಕಾರದ ಒಡೆದು ಆಳುವ ನೀತಿಗೆ ವಿರುದ್ಧವಾಗಿ ನಮ್ಮ ಹೋರಾಟ ನಡೆಯುತ್ತಿದೆ. ಮೀಸಲಾತಿ ವರ್ಗೀಕರಣದ ಮೂಲಕ ಅನ್ಯಾಯವಾದ ಸಮುದಾಯಕ್ಕೆ ಸಮಪಾಲು ದಕ್ಕಬೇಕು. ಒಳ ಮೀಸಲಾತಿಗಾಗಿ ರಾಜಕೀಯ ಪಕ್ಷಗಳು ಸಬ್‌ ಕಮಿಟಿ ರಚಿಸುವುದು ನಮಗೆ ಬೇಕಾಗಿಲ್ಲ. ಬದಲಾಗಿ ಮುಂಬರುವ ಅಧಿವೇಶನದಲ್ಲಿ ಘೋಷಣೆ ಮಾಡಬೇಕು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಅಂಗೀಕರಿಸಬೇಕು. ಸುಳ್ಳು ಜಾತಿ ಪತ್ರ ಪಡೆದವರಿಗೆ ಕಠಿಣ ಶಿಕ್ಷೆಯಾಗಬೇಕು, ಪಿಟಿಸಿಎಲ್ ಕಾಯ್ದೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಶಾಸಕರು, ಸಂಸದರು, ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಹರಿದಿರುವ ಚಡ್ಡಿ ಹೊತ್ತು ಓಡಾಡುವುದನ್ನು ನಿಲ್ಲಿಸಿ… ನಮ್ಮ ನ್ಯಾಯಯುತ ಪಾಲು ಪಡೆಯಲು ಹೋರಾಡಿ. ಇಲ್ಲದಿದ್ದರೆ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ಎಸ್ ಮಾರಪ್ಪನವರು, ವೆಂಕಟಗಿರಿಯಯ್ಯನವರು, ಬಿ.ಆರ್ ಭಾಸ್ಕರ್ ಪ್ರಸಾದ್, ಬಸವರಾಜ್ ಕೌತಾಳ್, ದಾನಪ್ಪ ಸಿ ನೀಲೋಗಲ್, ಎಂ.ಆರ್ ಭೇರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಗೋ ಬ್ಯಾಕ್ ಸೋಮಣ್ಣ ಎಂದ ಪ್ರತಿಭಟನಾಕಾರರು

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ವಸತಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.  ವೇದಿಕೆಯ ಹಿಂಭಾಗಕ್ಕೆ ಆಗಮಿಸಿದ ಅವರನ್ನು ವೇದಿಕೆಯ ಬಳಿ ಹೋಗಲು ಬಿಡದೆ ಪ್ರತಿಭಟನಾಕಾರರು ತಡೆದರು. ನೀವೇಕೆ ಬಂದೀರಿ? ನೀವು ನಮಗಾಗಿ ಏನು ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಕರೆದುಕೊಂಡು ಬನ್ನಿ ಎಂದು ತಾಕೀತು ಮಾಡಿದರು. ಸುಮಾರು 15 ನಿಮಿಷ ಕಾದ ನಂತರ ಸೋಮಣ್ಣ ಪೊಲೀಸರ ಸಹಾಯದೊಂದಿಗೆ ಜನರ ವಿರೋಧದ ನಡುವೆಯೂ ವೇದಿಕೆ ಏರಿದರು. ಆದರೆ ಜನರು ಗೋ ಬ್ಯಾಕ್ ಸೋಮಣ್ಣ, ಸಿಎಂ ಬೊಮ್ಮಾಯಿ ಬರಲೇಬೇಕು ಎಂದು ಜೋರಾಗಿ ಘೋಷಣೆ ಕೂಗಿದರು. ಸೋಮಣ್ಣನವರು ಮಾತನಾಡಲು ಬಿಡದೇ ಜನರು ಜೋರಾಗಿ ಘೋಷಣೆ ಕೂಗುತ್ತಲೇ ಇದ್ದರು. ಕಡೆಗೆ ಸಚಿವ ಸೋಮಣ್ಣ ದಾರಿಕಾಣದೆ ವೇದಿಕೆ ಇಳಿದು ವಾಪಸ್ ಹೋದರು.

ಇದನ್ನೂ ಓದಿ; ಒಳಮೀಸಲಾತಿಯೇ ಸಾಮಾಜಿಕ ನ್ಯಾಯವಾಗುವ ಜಾಯಮಾನದಲ್ಲಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...