Homeಕರ್ನಾಟಕಜಾತಿ ಗಣತಿ ವರದಿ ಜಾರಿ | ಅ.18ರಂದು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿ ಜಾರಿ | ಅ.18ರಂದು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯ ಜಾರಿ ಕುರಿತು ಅಕ್ಟೋಬರ್ 18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿಂದುಳಿದ ಸಮುದಾಯದ ಸಚಿವರು, ಶಾಸಕರು ಮತ್ತು ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ನಾನು ಹಿಂದೆಯೇ ಹೇಳಿದ್ದೆ” ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಸಿಎಂ, “ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದಿದ್ದಾರೆ.

“2013-18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ” ಎಂದು ಹೇಳಿದ್ದಾರೆ.

“ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ” ಎಂದು ವಿವರಿಸಿದ್ದಾರೆ.

“ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ” ಎಂದಿದ್ದಾರೆ.

“ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಜಾತಿ ಗಣತಿ ವರದಿ ಬಿಡುಗಡೆ ಮಾಡುವ ಸರ್ಕಾರದ ಕ್ರಮಕ್ಕೆ ವಿರೋಧವಿದೆ: ಗೃಹ ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...