Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...