Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...