Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...