Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....