Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...