Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...