Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...