Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...