Homeಮುಖಪುಟಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

ಏಪ್ರಿಲ್‌ 1ರಿಂದ ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಜಾರಿ: ಸರ್ಕಾರ ಘೋಷಣೆ

- Advertisement -
- Advertisement -

ಪ್ರಸ್ತುತ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವ್ಯಾಪ್ತಿಯಲ್ಲಿರುವ ಹಿಮಾಚಲ ಪ್ರದೇಶ ಸರ್ಕಾರಿ ನೌಕರರು ಏಪ್ರಿಲ್ 1 ರಿಂದ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಸರ್ಕಾರ ತಿಳಿಸಿರುವುದಾಗಿ ‘ದಿ ಟ್ರಿಬ್ಯೂನ್‌’ ವರದಿ ಮಾಡಿದೆ.

ಒಪಿಎಸ್ ಜಾರಿಗೆ ತರಲು ಶನಿವಾರ ಕ್ಯಾಬಿನೆಟ್ ನಿರ್ಧರಿಸಿದ ನಂತರ ಕಂದಾಯ ಮತ್ತು ತೋಟಗಾರಿಕೆ ಸಚಿವ ಜಗತ್ ಸಿಂಗ್ ನೇಗಿ ಅವರು ಪ್ರತಿಕ್ರಿಯಿಸಿದ್ದು, “ಎನ್‌ಪಿಎಸ್‌ಗೆ ಸರ್ಕಾರ ಮತ್ತು ನೌಕರರು ನೀಡುತ್ತಿರುವ ಕೊಡುಗೆಯನ್ನು ಏಪ್ರಿಲ್ 1ರಿಂದ ಸ್ಥಗಿತ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಪಿಎಸ್ ಅನುಷ್ಠಾನಕ್ಕೆ 2023-24ರಲ್ಲಿ ಸರ್ಕಾರ ಹೆಚ್ಚುವರಿ 1,000 ಕೋಟಿ ರೂ. ವಿನಿಯೋಗಿಸಲಿದೆ. ಎನ್‌ಪಿಎಸ್ ಅಡಿಯಲ್ಲಿ ಅಸ್ತಿತ್ವದಲ್ಲಿರುವ 1.36 ಲಕ್ಷ ಉದ್ಯೋಗಿಗಳನ್ನು ಸೇರಿದಂತೆ, ಸರ್ಕಾರಿ ಸೇವೆಯಲ್ಲಿನ ಎಲ್ಲಾ ಹೊಸ ನೇಮಕಾತಿಗಳನ್ನೂ ಒಪಿಎಸ್ ಅಡಿಯಲ್ಲಿ ತರಲಾಗುತ್ತಿದೆ ಎಂದು ತಿಳಿಸಿದ್ದಾರೆ.

“ಯಾವುದೇ ಉದ್ಯೋಗಿ ಎನ್‌ಪಿಎಸ್ ಅಡಿಯಲ್ಲಿ ಮುಂದುವರಿಯಲು ಬಯಸಿದರೆ, ಅವರು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ತಮ್ಮ ಒಪ್ಪಿಗೆಯನ್ನು ನೀಡಬಹುದು” ಎಂದು ನೇಗಿ ವಿವರಿಸಿದ್ದಾರೆ.

“ಇದಲ್ಲದೆ, ಎನ್‌ಪಿಎಸ್ ಕಡಿತಗಳನ್ನು ನಿಲ್ಲಿಸಿದ ನಂತರ ನೌಕರರನ್ನು ಸಾಮಾನ್ಯ ಭವಿಷ್ಯ ನಿಧಿ (ಜಿಪಿಎಫ್) ವ್ಯಾಪ್ತಿಗೆ ತರಲು ಕ್ಯಾಬಿನೆಟ್ ನಿರ್ಧರಿಸಿದೆ. ಮೇ 15, 2003ರ ನಂತರ ನಿವೃತ್ತರಾದ ಎನ್‌ಪಿಎಸ್‌ ಅಡಿಯಲ್ಲಿನ ಉದ್ಯೋಗಿಗಳಿಗೆ ಪ್ರಸ್ತಾವಿತ ದಿನಾಂಕದಿಂದ ಒಪಿಎಸ್‌‌ ನೀಡಲಾಗುವುದು” ಎಂದಿದ್ದಾರೆ ನೇಗಿ.

ಇಲ್ಲಿಯವರೆಗೆ ಎನ್‌ಪಿಎಸ್ ಕೊಡುಗೆಯಾಗಿ ಠೇವಣಿಯಾಗಿರುವ 8,000 ಕೋಟಿ ರೂ.ಗಳನ್ನು ಕೇಂದ್ರದಿಂದ ಹಿಂಪಡೆಯಲು ಕ್ಯಾಬಿನೆಟ್ ನಿರ್ಣಯವನ್ನು ಅಂಗೀಕರಿಸಿತು.

“ಒಪಿಎಸ್‌ಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರದ ಅನುಷ್ಠಾನಕ್ಕಾಗಿ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಚರಣಾ ಕಾರ್ಯವಿಧಾನ’ (SOP) ರೂಪಿಸಲು ಹಣಕಾಸು ಇಲಾಖೆಗೆ ನಿರ್ದೇಶಿಸಲಾಗಿದೆ” ಎಂದು ನೇಗಿ ಮಾಹಿತಿ ನೀಡಿದ್ದಾರೆ.

ಒಪಿಎಸ್ ಅನ್ನು ಜಾರಿಗೆ ತರಲು ರಾಜ್ಯವು ತನ್ನದೇ ಆದ ಸೂತ್ರವನ್ನು ಅಳವಡಿಸಿಕೊಳ್ಳಲಿದೆ ಎಂದಿದ್ದಾರೆ ಸಚಿವರು. ಇದನ್ನು ಜಾರಿಗೆ ತರಲು ರಾಜ್ಯದಲ್ಲಿ ಛತ್ತೀಸ್‌ಗಢ ಸೂತ್ರವನ್ನು ಅಳವಡಿಸಿಕೊಳ್ಳಬಹುದು ಎಂಬ ಮಾತುಕತೆಗಳೂ ಆರಂಭದಲ್ಲಿ ನಡೆದಿವೆ. “ನಾವು ಬೇರೆ ಯಾವುದೇ ರಾಜ್ಯದ ಸೂತ್ರವನ್ನು ನಕಲು ಮಾಡಿಲ್ಲ. ನಾವು ಒಪಿಎಸ್‌ಅನ್ನು ನಮ್ಮದೇ ಆದ ಸೂತ್ರದ ಪ್ರಕಾರ ಜಾರಿಗೊಳಿಸುತ್ತೇವೆ” ಎಂದಿದ್ದಾರೆ ನೇಗಿ.

ಇದನ್ನೂ ಓದಿರಿ: ಒಪಿಎಸ್‌ ಆಯ್ಕೆ ಮಾಡಿಕೊಳ್ಳಲು ಆಯ್ದ ಕೇಂದ್ರ ಸರ್ಕಾರಿ ನೌಕರರಿಗೆ ಅವಕಾಶ; ಆದೇಶ

“ಎನ್‌ಪಿಎಸ್‌ಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸುವುದಾಗಿ ಘೋಷಿಸಿರುವುದು ಮಹತ್ವದ್ದಾಗಿದೆ. ಒಪಿಎಸ್‌ ಜಾರಿಗೆ ಇರುವ ದೊಡ್ಡ ಅಡತಡೆಯನ್ನು ಈ ಘೋಷಣೆಯಿಂದ ತೆಗೆದುಹಾಕಲಾಗಿದೆ” ಎಂದು ನೌಕರರು ಖುಷಿಯಾಗಿದ್ದಾರೆ.

“ಒಮ್ಮೆ ಎನ್‌ಪಿಎಸ್‌ ಕಡಿತಗಳನ್ನು ನಿಲ್ಲಿಸಿದರೆ, ಎಲ್ಲಾ ಎನ್‌ಪಿಎಸ್‌ ಉದ್ಯೋಗಿಗಳಿಗೆ ಜಿಪಿಎಫ್‌ ಸಂಖ್ಯೆಯನ್ನು ನೀಡಲಾಗುತ್ತದೆ” ಎಂದು ಎನ್‌ಪಿಎಸ್‌‌ ನೌಕರರ ಸಂಘದ ನಾಯಕರೊಬ್ಬರು ಹೇಳಿದ್ದಾರೆ. “ಆದರೆ ‘ನಿಯಮಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ’ದ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಕಾಯಬೇಕಾಗಿದೆ” ಎಂದಿದ್ದಾರೆ.

ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೂ ಮೊದಲು ಸರ್ಕಾರಿ ನೌಕರರು ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನ ನಡೆಸಿದ್ದರು. ಜೊತೆಗೆ ಒಪಿಎಸ್‌ ಜಾರಿಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ನೌಕರರು ಭಾವಿಸುತ್ತಾರೆ. ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ‘ಒಪಿಎಸ್‌ ಜಾರಿ’ಯ ಘೋಷಣೆಯನ್ನು ಸರ್ಕಾರ ಮಾಡಿತ್ತು.

ಕೆಲವು ರಾಜ್ಯಗಳಲ್ಲಿ ಮಾತ್ರ ಒಪಿಎಸ್ ಜಾರಿಯಾಗಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ‘ವೋಟ್ ಫಾರ್‌ ಒಪಿಎಸ್‌’ ಅಭಿಯಾನವನ್ನು ನೌಕರರು ನಡೆಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...