Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...