Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...