Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...