Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...