Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...