Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...