Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

- Advertisement -
- Advertisement -

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಜಾರಿಗೆ ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ, ಸಚಿವ ಸಂಪುಟದಲ್ಲಿ ಈ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಕೆಳಮನೆಯಲ್ಲಿ ಕಾಯ್ದೆಗೆ ಬಹುಮತ ದೊರೆತಿದ್ದು, ಅದನ್ನು ಮಂಡಿಸಲಾಗಿದೆ. ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ ಪ್ರಜಾಪ್ರಭುತ್ವದಲ್ಲಿ ಬಹುಮತ ಪಡೆದು, ಜನವರಿ ವೇಳೆಗೆ ಮೇಲ್ಮನೆಯಲ್ಲಿ ಕಾಯ್ದೆ ಮಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಎಲ್ಲಾ ಧರ್ಮ, ಜಾತಿ, ಪಕ್ಷದವರಿಗೂ ಅನ್ವಯಿಸುತ್ತದೆ. ಹಾಗಾಗಿ ಅದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ವಾಗತಿಸಬೇಕು. ವಿರೋಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕಾಯ್ದೆಯನ್ನು ವಿರೋಧಿಸುವವರು ರಾಜಕೀಯ ಕಾರಣಗಳಿಗಾಗಿ ಮಾತ್ರ ವಿರೋಧಿಸುತ್ತಾರೆ. ಆದರೆ ಮಾನಸಿಕವಾಗಿ ಅವರಿಗೂ ಈ ಕಾಯ್ದೆಗೆ ಒಪ್ಪಿಗೆ ಇದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು ಎಂಬ ಚರ್ಚೆಗಳಾಗಿವೆ. ಸಚಿವ ಪೂಜಾರಿಯವರ ಹೇಳಿಕೆ ಈ ಚರ್ಚೆಯ ಹಿನ್ನೆಲೆಯಲ್ಲಿ ಹೊರಬಿದ್ದಿದೆ. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...