Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ: ಶ್ರೀನಿವಾಸ ಪೂಜಾರಿ

- Advertisement -
- Advertisement -

ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಜಾರಿಗೆ ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ, ಸಚಿವ ಸಂಪುಟದಲ್ಲಿ ಈ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಕೆಳಮನೆಯಲ್ಲಿ ಕಾಯ್ದೆಗೆ ಬಹುಮತ ದೊರೆತಿದ್ದು, ಅದನ್ನು ಮಂಡಿಸಲಾಗಿದೆ. ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ ಪ್ರಜಾಪ್ರಭುತ್ವದಲ್ಲಿ ಬಹುಮತ ಪಡೆದು, ಜನವರಿ ವೇಳೆಗೆ ಮೇಲ್ಮನೆಯಲ್ಲಿ ಕಾಯ್ದೆ ಮಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಎಲ್ಲಾ ಧರ್ಮ, ಜಾತಿ, ಪಕ್ಷದವರಿಗೂ ಅನ್ವಯಿಸುತ್ತದೆ. ಹಾಗಾಗಿ ಅದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ವಾಗತಿಸಬೇಕು. ವಿರೋಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಕಾಯ್ದೆಯನ್ನು ವಿರೋಧಿಸುವವರು ರಾಜಕೀಯ ಕಾರಣಗಳಿಗಾಗಿ ಮಾತ್ರ ವಿರೋಧಿಸುತ್ತಾರೆ. ಆದರೆ ಮಾನಸಿಕವಾಗಿ ಅವರಿಗೂ ಈ ಕಾಯ್ದೆಗೆ ಒಪ್ಪಿಗೆ ಇದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ?

ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು ಎಂಬ ಚರ್ಚೆಗಳಾಗಿವೆ. ಸಚಿವ ಪೂಜಾರಿಯವರ ಹೇಳಿಕೆ ಈ ಚರ್ಚೆಯ ಹಿನ್ನೆಲೆಯಲ್ಲಿ ಹೊರಬಿದ್ದಿದೆ. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ

ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ

ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.

ಜನಾಭಿಪ್ರಾಯ

ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...