Homeಕರ್ನಾಟಕಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ‘ದೂರಾಲೋಚನೆ’ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ ‘ದುರಾಲೋಚನೆ’ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳ ಮುಖಂಡರು ಆಗ್ರಹಿಸಿದರು.

ಸೋಮವಾರ (ಮಾ.23) ಬೆಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಬಿ.ಟಿ ಲಲಿತಾ ನಾಯಕ್, ಎನ್‌ ವೆಂಕಟೇಶ್, ತಾರಾ ರಾವ್, ಕೆ.ಎಲ್‌ ಅಶೋಕ್, ಎಚ್.ಆರ್‌ ಬಸವರಾಜಪ್ಪ, ನೂರ್ ಶ್ರೀಧರ್, ಯೂಸುಫ್ ಕನ್ನಿ,ಕೆ.ವಿ ಭಟ್, ವಿನಯ್ ಶ್ರೀನಿವಾಸ್, ಹೈದರ್ ಬೇಗ್, ರಿಯಾಝ್ ಅಹ್ಮದ್, ನಾಗೇಶ್ವ ಅರಳಕುಪ್ಪೆ, ಕಾತ್ಯಾಯಿನಿ, ಸ್ವಾತಿ ಸುಂದರೇಶ್, ಮರಿಯಪ್ಪ, ಅಮ್ಜದ್ ಪಾಷಾ, ರಮೇಶ್ ಬೆಲ್ಲಮಕೊಂಡ ಸೇರಿದಂತೆ ಹಲವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಎಸ್‌ಐಆರ್ ಸಂವಿಧಾನದಲ್ಲಿ ಇಲ್ಲದ, ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸುವ, ತರಾತುರಿಯಲ್ಲಿ ನಡೆಸುವ, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸುವ, ಮಹಿಳೆಯರು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲ ಜಾತಿಯ ಬಡವರು ದೊಡ್ಡ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಕಾರಣವಾಗುತ್ತಿರುವ ಮತಪಟ್ಟಿಯ ಪರಿಷ್ಕರಣಾ ಪದ್ಧತಿ. ದಾಖಲೆಗಳ ಕಾರಣ ನೀಡಿ ಅರ್ಹ ಪ್ರಜೆಗಳ ಮತದಾನದ ಹಕ್ಕನ್ನು ಜೀವಂತ ಕಾಲದಲ್ಲಿಯೇ ನಿರಾಕರಿಸುವುದು ಪ್ರಜಾತಂತ್ರ ವ್ಯವಸ್ಥೆಯ ದುರಂತ ಅಂತ್ಯವಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್ ನಡೆದ ರಾಜ್ಯಗಳಲ್ಲಿ 20 ಲಕ್ಷದಿಂದ ಆರಂಭಿಸಿ 3 ಕೋಟಿಯ ತನಕ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕರ್ನಾಟಕ ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ರಾಜ್ಯವಾಗಿದೆ. ಶೇ.2ರಷ್ಟು ಮತಗಳು ರಾಜ್ಯದ ಚುನಾವಣಾ ಭವಿಷ್ಯವನ್ನೇ ಏರುಪೇರು ಮಾಡಲಿವೆ. ಈ ಕಾರಣದಿಂದಾಗಿ ನಾವು ಅಸಂವಿಧಾನಿಕವಾದ ಮತ್ತು ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರದಬ್ಬುವ ಮತಪಟ್ಟಿಯನ್ನು ಒಪ್ಪುವುದಿಲ್ಲ ಮತ್ತು ಮನಬಂದಂತೆ ವಕ್ರೀಕರಿಸುವುದನ್ನು ಸಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆ ವ್ಯವಧಾನದ ಜೊತೆ ‘ಹೊರ ತಳ್ಳುವುದಲ್ಲ’, ‘ಒಳ ಸೇರಿಸಿಕೊಳ್ಳಬೇಕು’ ಎಂಬ ಧೋರಣೆಯ ಜೊತೆ ನಡೆಯಬೇಕು. ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಇರುವಂತೆ ಕರಡು ಪಟ್ಟಿಯನ್ನು ಗ್ರಾಮ ಮತ್ತು ವಾರ್ಡ್ ಸಭೆಗಳಲ್ಲಿ ಬಹಿರಂಗವಾಗಿ ಅಂಟಿಸಿ, ಓದಿ, ಮುಕ್ತವಾಗಿ ತಿದ್ದುಪಡಿಗಳನ್ನು, ತಕರಾರುಗಳನ್ನು ಸ್ವೀಕರಿಸಿ, ಅವೆಲ್ಲವನ್ನೂ ಪರಿಶೀಲಿಸಿದ ನಂತರವೇ ಅಂತಿಮಗೊಳಿಸಬೇಕು. ಗ್ರಾಮ ಸಭೆಯಲ್ಲಿ ಮತ ಪಟ್ಟಿಯ ಪರಿಶೀಲನೆ ಕಡ್ಡಾಯವಾಗಬೇಕು.

ಸುಪ್ರೀಂಕೋರ್ಟ್‌ನ ಆದೇಶದಂತೆ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಪರಿಗಣಿಸಬೇಕು. ಆಧಾರ್ ಕಾರ್ಡ್ ಇದ್ದವರನ್ನು ಯಾವುದೇ ಕಾರಣದಿಂದಲೂ ಮತಪಟ್ಟಿಯಿಂದ ಹೊರಗಿಡಬಾರದು ಭಾರತೀಯರಲ್ಲದ ಅನುಮಾನಗಳು ಬಂದಲ್ಲಿ ಅದನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಪ್ರಕ್ರಿಯೆ ನಡೆದು ದೃಢೀಕರಣಗೊಂಡ ನಂತರ ಅಷ್ಟೇ ಮತ ಪಟ್ಟಿಯಿಂದ ತೆಗೆಯಬೇಕು. ದಾಖಲೆಗಳಿಲ್ಲದಿದ್ದಲ್ಲಿ ಸಿದ್ಧಪಡಿಸಿಕೊಂಡು ಹಾಗೂ ಅಪೀಲು ಸಲ್ಲಿಸಲು ಆರು ತಿಂಗಳ ಸಮಯ ನೀಡಬೇಕು ಎಂದರು.

ರಾಜ್ಯದ ವಯಸ್ಕರ ಜನ ಸಂಖ್ಯೆಗಿಂತ ಹಾಗೂ ಸ್ಥಳೀಯ ಚುನಾವಣೆಗಳಿಗಾಗಿ ರಾಜ್ಯ ಚುನಾವಣಾ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯ ಸಂಖ್ಯೆಗಿಂತ ಶೇ.1ಕ್ಕಿಂತ ಹೆಚ್ಚು ವ್ಯತ್ಯಾಸವಿರಬಾರದು. ಲಕ್ಷಾಂತರ ಸಂಖ್ಯೆಯಲ್ಲಿ ಮತದಾರರನ್ನು ಹೊರದಬ್ಬಿ ಚುನಾವಣೆ ನಡೆಸಲು ಅವಕಾಶ ನೀಡುವುದಿಲ್ಲ. ನಮ್ಮ ಚುನಾವಣೆಗಳನ್ನು ನಾವೇ ನಡೆಸಿಕೊಳ್ಳುತ್ತೇವೆ, ಕೇಂದ್ರದ ಮಧ್ಯ ಪ್ರವೇಶ ಅಗತ್ಯವಿಲ್ಲ ಎಂಬ ತೀರ್ಮಾನಕ್ಕೆ ಬರುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಜನರು ತೀವ್ರತರನಾದ ಗೊಂದಲ, ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸಬೇಕು. ಇದಕ್ಕಾಗಿ ಮೂರು ರೀತಿಯ ಜನಸ್ನೇಹಿ ಕ್ರಮಗಳಿಗೆ ಮುಂದಾಗಬೇಕು. ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಸರ್ಕಾರ ಮಾಡಿದಂತೆ ಎಲ್ಲ ಗ್ರಾಮ ಪಂಚಾಯತ್‌ ಮತ್ತು ವಾರ್ಡುಗಳಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಬೇಕು. ಕೇರಳದಲ್ಲಿ ಮಾಡಿದಂತೆ ದಾಖಲೆಗಳಿಲ್ಲದ ಜನರಿಗೆ ಸತಾಯಿಸದೆ ಸುಲಭವಾಗಿ, ತ್ವರಿತವಾಗಿ ವಾಸದ ಹಾಗೂ ಜಾತಿಯ ಪ್ರಮಾಣ ಪತ್ರಗಳನ್ನು ಒದಗಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಸುತ್ತೋಲೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡಿನಲ್ಲಿ ಮಾಡಿದಂತೆ ಬಿಎಲ್‌ಒಗಳಿಗೆ ಯುದ್ದೋಪಾದಿಯಲ್ಲಿ ಪರಿಣಾಮಕಾರಿಯಾದ ತರಬೇತಿ ನೀಡಿ, ಅವರು ಪ್ರತಿ ಮನೆಗೂ ತಲುಪಿ ಒಬ್ಬರೂ ಹೊರಗುಳಿಯದಂತೆ ಎಚ್ಚರಿಕೆವಹಿಸುತ್ತಾ ನೊಂದಾವಣಿ ಪ್ರಕ್ರಿಯೆ ನಡೆಸುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸ್ಥಳೀಯ ಚುನಾವಣೆಗಳು ಬರುತ್ತಿರುವುದರಿಂದ ಮತ್ತು ಜನರಲ್ಲಿ ಆತಂಕ ಇರುವುದರಿಂದ ಮಾಸ್ಟರ್ ರೋಲಿನ ಸುಧಾರಣೆಯನ್ನು ಪರಿಣಾಮಕಾರಿಯಾಗಿ ಮಾಡಿಸಲು ವಿಶೇಷ ಗಮನ ನೀಡಬೇಕು. ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಇರುವಂತೆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಗ್ರಾಮ ಸಭೆಗಳನ್ನು ಹಾಗೂ ವಾರ್ಡ್ ಸಭೆಗಳನ್ನು ಕರೆದು ತಿದ್ದುಪಡಿಗಳನ್ನು ಸ್ವೀಕರಿಸಿ, ಸಾರ್ವಜನಿಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿ ಮಾಡಿಯೇ ಅಂತಿಮಗೊಳಿಸಬೇಕು.

ಈ ಗ್ರಾಮ/ ವಾರ್ಡ್ ಸಭೆಗಳನ್ನು ಸಿಎಜಿ ರೂಪಿಸಿರುವ ಸಾಮಾಜಿಕ ಪರಿಶೀಲನೆಯ ಮಾನದಂಡಗಳನ್ನು ಅನ್ವಯಿಸಿ ನಡೆಸಬೇಕು. ಆ ಮೂಲಕ ರಾಜ್ಯ ಚುನಾವಣಾ ಆಯೋಗದ ಪಟ್ಟಿಗೆ ಹೆಚ್ಚಿನ ಖಚಿತತೆ ಹಾಗೂ ಮಾನ್ಯತೆ ಬರುವಂತೆ ನೋಡಿಕೊಳ್ಳಬೇಕು. ಸಾರಾಂಶದಲ್ಲಿ ರಾಜ್ಯ ತನ್ನದೇ ಆದ ಖಚಿತ ಮತ ಮಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ಸಂವಿಧಾನದ ಮೌಲ್ಯಗಳಿಗಿಂತ, ಪ್ರಜಾತಂತ್ರದ ಬುನಾದಿಗಿಂತ ಮೇಲಿನದು ಯಾವುದೂ ಇಲ್ಲ. ಚುನಾವಣಾ ಆಯೋಗ ಅಸಂವಿಧಾನಿಕವಾಗಿ, ಅಪ್ರಜಾತಾಂತ್ರಿಕವಾಗಿ ನಡೆದುಕೊಂಡರೆ ಕರ್ನಾಟಕ ಅದನ್ನು ಸಹಿಸುವುದಿಲ್ಲ ಮತ್ತು ಬಲವಂತವಾಗಿ ನಮ್ಮ ಮೇಲೆ ಹೇರಲು ಬಿಡುವುದಿಲ್ಲ. ನಮ್ಮ ಹಕ್ಕೊತ್ತಾಯಗಳನ್ನು ಕೇಂದ್ರ ಚುನಾವಣಾ ಅಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರಕಾರಕ್ಕೆ ಇಂದೇ ಮನವಿ, ಎಚ್ಚರಿಕೆಯ ಆಗ್ರಹಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...