Homeಕರ್ನಾಟಕಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ‘ದೂರಾಲೋಚನೆ’ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ ‘ದುರಾಲೋಚನೆ’ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು ಎಂದು ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳ ಮುಖಂಡರು ಆಗ್ರಹಿಸಿದರು.

ಸೋಮವಾರ (ಮಾ.23) ಬೆಂಗಳೂರಿನ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಬಿ.ಟಿ ಲಲಿತಾ ನಾಯಕ್, ಎನ್‌ ವೆಂಕಟೇಶ್, ತಾರಾ ರಾವ್, ಕೆ.ಎಲ್‌ ಅಶೋಕ್, ಎಚ್.ಆರ್‌ ಬಸವರಾಜಪ್ಪ, ನೂರ್ ಶ್ರೀಧರ್, ಯೂಸುಫ್ ಕನ್ನಿ,ಕೆ.ವಿ ಭಟ್, ವಿನಯ್ ಶ್ರೀನಿವಾಸ್, ಹೈದರ್ ಬೇಗ್, ರಿಯಾಝ್ ಅಹ್ಮದ್, ನಾಗೇಶ್ವ ಅರಳಕುಪ್ಪೆ, ಕಾತ್ಯಾಯಿನಿ, ಸ್ವಾತಿ ಸುಂದರೇಶ್, ಮರಿಯಪ್ಪ, ಅಮ್ಜದ್ ಪಾಷಾ, ರಮೇಶ್ ಬೆಲ್ಲಮಕೊಂಡ ಸೇರಿದಂತೆ ಹಲವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಎಸ್‌ಐಆರ್ ಸಂವಿಧಾನದಲ್ಲಿ ಇಲ್ಲದ, ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸುವ, ತರಾತುರಿಯಲ್ಲಿ ನಡೆಸುವ, ಜನಸಾಮಾನ್ಯರನ್ನು ಇಕ್ಕಟ್ಟಿಗೆ ಸಿಲುಕಿಸುವ, ಮಹಿಳೆಯರು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲ ಜಾತಿಯ ಬಡವರು ದೊಡ್ಡ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಕಾರಣವಾಗುತ್ತಿರುವ ಮತಪಟ್ಟಿಯ ಪರಿಷ್ಕರಣಾ ಪದ್ಧತಿ. ದಾಖಲೆಗಳ ಕಾರಣ ನೀಡಿ ಅರ್ಹ ಪ್ರಜೆಗಳ ಮತದಾನದ ಹಕ್ಕನ್ನು ಜೀವಂತ ಕಾಲದಲ್ಲಿಯೇ ನಿರಾಕರಿಸುವುದು ಪ್ರಜಾತಂತ್ರ ವ್ಯವಸ್ಥೆಯ ದುರಂತ ಅಂತ್ಯವಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್ ನಡೆದ ರಾಜ್ಯಗಳಲ್ಲಿ 20 ಲಕ್ಷದಿಂದ ಆರಂಭಿಸಿ 3 ಕೋಟಿಯ ತನಕ ಅರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕರ್ನಾಟಕ ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ರಾಜ್ಯವಾಗಿದೆ. ಶೇ.2ರಷ್ಟು ಮತಗಳು ರಾಜ್ಯದ ಚುನಾವಣಾ ಭವಿಷ್ಯವನ್ನೇ ಏರುಪೇರು ಮಾಡಲಿವೆ. ಈ ಕಾರಣದಿಂದಾಗಿ ನಾವು ಅಸಂವಿಧಾನಿಕವಾದ ಮತ್ತು ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರದಬ್ಬುವ ಮತಪಟ್ಟಿಯನ್ನು ಒಪ್ಪುವುದಿಲ್ಲ ಮತ್ತು ಮನಬಂದಂತೆ ವಕ್ರೀಕರಿಸುವುದನ್ನು ಸಹಿಸುವುದಿಲ್ಲ ಎಂದು ಅವರು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆ ವ್ಯವಧಾನದ ಜೊತೆ ‘ಹೊರ ತಳ್ಳುವುದಲ್ಲ’, ‘ಒಳ ಸೇರಿಸಿಕೊಳ್ಳಬೇಕು’ ಎಂಬ ಧೋರಣೆಯ ಜೊತೆ ನಡೆಯಬೇಕು. ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಇರುವಂತೆ ಕರಡು ಪಟ್ಟಿಯನ್ನು ಗ್ರಾಮ ಮತ್ತು ವಾರ್ಡ್ ಸಭೆಗಳಲ್ಲಿ ಬಹಿರಂಗವಾಗಿ ಅಂಟಿಸಿ, ಓದಿ, ಮುಕ್ತವಾಗಿ ತಿದ್ದುಪಡಿಗಳನ್ನು, ತಕರಾರುಗಳನ್ನು ಸ್ವೀಕರಿಸಿ, ಅವೆಲ್ಲವನ್ನೂ ಪರಿಶೀಲಿಸಿದ ನಂತರವೇ ಅಂತಿಮಗೊಳಿಸಬೇಕು. ಗ್ರಾಮ ಸಭೆಯಲ್ಲಿ ಮತ ಪಟ್ಟಿಯ ಪರಿಶೀಲನೆ ಕಡ್ಡಾಯವಾಗಬೇಕು.

ಸುಪ್ರೀಂಕೋರ್ಟ್‌ನ ಆದೇಶದಂತೆ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಪರಿಗಣಿಸಬೇಕು. ಆಧಾರ್ ಕಾರ್ಡ್ ಇದ್ದವರನ್ನು ಯಾವುದೇ ಕಾರಣದಿಂದಲೂ ಮತಪಟ್ಟಿಯಿಂದ ಹೊರಗಿಡಬಾರದು ಭಾರತೀಯರಲ್ಲದ ಅನುಮಾನಗಳು ಬಂದಲ್ಲಿ ಅದನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಪ್ರಕ್ರಿಯೆ ನಡೆದು ದೃಢೀಕರಣಗೊಂಡ ನಂತರ ಅಷ್ಟೇ ಮತ ಪಟ್ಟಿಯಿಂದ ತೆಗೆಯಬೇಕು. ದಾಖಲೆಗಳಿಲ್ಲದಿದ್ದಲ್ಲಿ ಸಿದ್ಧಪಡಿಸಿಕೊಂಡು ಹಾಗೂ ಅಪೀಲು ಸಲ್ಲಿಸಲು ಆರು ತಿಂಗಳ ಸಮಯ ನೀಡಬೇಕು ಎಂದರು.

ರಾಜ್ಯದ ವಯಸ್ಕರ ಜನ ಸಂಖ್ಯೆಗಿಂತ ಹಾಗೂ ಸ್ಥಳೀಯ ಚುನಾವಣೆಗಳಿಗಾಗಿ ರಾಜ್ಯ ಚುನಾವಣಾ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯ ಸಂಖ್ಯೆಗಿಂತ ಶೇ.1ಕ್ಕಿಂತ ಹೆಚ್ಚು ವ್ಯತ್ಯಾಸವಿರಬಾರದು. ಲಕ್ಷಾಂತರ ಸಂಖ್ಯೆಯಲ್ಲಿ ಮತದಾರರನ್ನು ಹೊರದಬ್ಬಿ ಚುನಾವಣೆ ನಡೆಸಲು ಅವಕಾಶ ನೀಡುವುದಿಲ್ಲ. ನಮ್ಮ ಚುನಾವಣೆಗಳನ್ನು ನಾವೇ ನಡೆಸಿಕೊಳ್ಳುತ್ತೇವೆ, ಕೇಂದ್ರದ ಮಧ್ಯ ಪ್ರವೇಶ ಅಗತ್ಯವಿಲ್ಲ ಎಂಬ ತೀರ್ಮಾನಕ್ಕೆ ಬರುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಜನರು ತೀವ್ರತರನಾದ ಗೊಂದಲ, ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸಬೇಕು. ಇದಕ್ಕಾಗಿ ಮೂರು ರೀತಿಯ ಜನಸ್ನೇಹಿ ಕ್ರಮಗಳಿಗೆ ಮುಂದಾಗಬೇಕು. ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಸರ್ಕಾರ ಮಾಡಿದಂತೆ ಎಲ್ಲ ಗ್ರಾಮ ಪಂಚಾಯತ್‌ ಮತ್ತು ವಾರ್ಡುಗಳಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಬೇಕು. ಕೇರಳದಲ್ಲಿ ಮಾಡಿದಂತೆ ದಾಖಲೆಗಳಿಲ್ಲದ ಜನರಿಗೆ ಸತಾಯಿಸದೆ ಸುಲಭವಾಗಿ, ತ್ವರಿತವಾಗಿ ವಾಸದ ಹಾಗೂ ಜಾತಿಯ ಪ್ರಮಾಣ ಪತ್ರಗಳನ್ನು ಒದಗಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ ಸುತ್ತೋಲೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ತಮಿಳುನಾಡಿನಲ್ಲಿ ಮಾಡಿದಂತೆ ಬಿಎಲ್‌ಒಗಳಿಗೆ ಯುದ್ದೋಪಾದಿಯಲ್ಲಿ ಪರಿಣಾಮಕಾರಿಯಾದ ತರಬೇತಿ ನೀಡಿ, ಅವರು ಪ್ರತಿ ಮನೆಗೂ ತಲುಪಿ ಒಬ್ಬರೂ ಹೊರಗುಳಿಯದಂತೆ ಎಚ್ಚರಿಕೆವಹಿಸುತ್ತಾ ನೊಂದಾವಣಿ ಪ್ರಕ್ರಿಯೆ ನಡೆಸುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸ್ಥಳೀಯ ಚುನಾವಣೆಗಳು ಬರುತ್ತಿರುವುದರಿಂದ ಮತ್ತು ಜನರಲ್ಲಿ ಆತಂಕ ಇರುವುದರಿಂದ ಮಾಸ್ಟರ್ ರೋಲಿನ ಸುಧಾರಣೆಯನ್ನು ಪರಿಣಾಮಕಾರಿಯಾಗಿ ಮಾಡಿಸಲು ವಿಶೇಷ ಗಮನ ನೀಡಬೇಕು. ಚುನಾವಣಾ ಆಯೋಗದ ಮ್ಯಾನ್ಯುಯಲ್‌ನಲ್ಲಿ ಇರುವಂತೆ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮುನ್ನ ಗ್ರಾಮ ಸಭೆಗಳನ್ನು ಹಾಗೂ ವಾರ್ಡ್ ಸಭೆಗಳನ್ನು ಕರೆದು ತಿದ್ದುಪಡಿಗಳನ್ನು ಸ್ವೀಕರಿಸಿ, ಸಾರ್ವಜನಿಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿ ಮಾಡಿಯೇ ಅಂತಿಮಗೊಳಿಸಬೇಕು.

ಈ ಗ್ರಾಮ/ ವಾರ್ಡ್ ಸಭೆಗಳನ್ನು ಸಿಎಜಿ ರೂಪಿಸಿರುವ ಸಾಮಾಜಿಕ ಪರಿಶೀಲನೆಯ ಮಾನದಂಡಗಳನ್ನು ಅನ್ವಯಿಸಿ ನಡೆಸಬೇಕು. ಆ ಮೂಲಕ ರಾಜ್ಯ ಚುನಾವಣಾ ಆಯೋಗದ ಪಟ್ಟಿಗೆ ಹೆಚ್ಚಿನ ಖಚಿತತೆ ಹಾಗೂ ಮಾನ್ಯತೆ ಬರುವಂತೆ ನೋಡಿಕೊಳ್ಳಬೇಕು. ಸಾರಾಂಶದಲ್ಲಿ ರಾಜ್ಯ ತನ್ನದೇ ಆದ ಖಚಿತ ಮತ ಮಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು.

ಸಂವಿಧಾನದ ಮೌಲ್ಯಗಳಿಗಿಂತ, ಪ್ರಜಾತಂತ್ರದ ಬುನಾದಿಗಿಂತ ಮೇಲಿನದು ಯಾವುದೂ ಇಲ್ಲ. ಚುನಾವಣಾ ಆಯೋಗ ಅಸಂವಿಧಾನಿಕವಾಗಿ, ಅಪ್ರಜಾತಾಂತ್ರಿಕವಾಗಿ ನಡೆದುಕೊಂಡರೆ ಕರ್ನಾಟಕ ಅದನ್ನು ಸಹಿಸುವುದಿಲ್ಲ ಮತ್ತು ಬಲವಂತವಾಗಿ ನಮ್ಮ ಮೇಲೆ ಹೇರಲು ಬಿಡುವುದಿಲ್ಲ. ನಮ್ಮ ಹಕ್ಕೊತ್ತಾಯಗಳನ್ನು ಕೇಂದ್ರ ಚುನಾವಣಾ ಅಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರಕಾರಕ್ಕೆ ಇಂದೇ ಮನವಿ, ಎಚ್ಚರಿಕೆಯ ಆಗ್ರಹಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...