Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...