Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...