Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...