Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...