Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...