Homeಮುಖಪುಟ"ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು" : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

“ಧರ್ಮದ ಕಾರಣಕ್ಕೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” : ಪೋಕ್ಸೋ ಕೇಸ್‌ನಲ್ಲಿ ಖುಲಾಸೆಗೊಂಡ ಮುಸ್ಲಿಂ ಬಳೆ ವ್ಯಾಪಾರಿ

- Advertisement -
- Advertisement -

ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಗುಂಪಿನಿಂದ ಹಲ್ಲೆಗೊಳಗಾಗಿ, ಬಳಿಕ ಪೊಲೀಸರಿಂದ ಬಂಧಿತರಾಗಿದ್ದ ಬಳೆ ವ್ಯಾಪಾರಿಯನ್ನು ಮಧ್ಯ ಪ್ರದೇಶ ಇಂದೋರ್ ನ್ಯಾಯಾಲಯ ಸೋಮವಾರ (ಡಿ.2) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ತಸ್ಲೀಂ ಅಲೀ ಎಂಬ ಬಳೆ ವ್ಯಾಪಾರಿಗೆ ರಾಖಿ ಹಬ್ಬದ ವೇಳೆ ಬಳೆ ವ್ಯಾಪಾರ ಮಾಡುವ ನೆಪದಲ್ಲಿ ಹಿಂದೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಗುಂಪೊಂದು ಥಳಿಸಿತ್ತು. 2021ರ ಆಗಸ್ಟ್ 22ರಂದು ಈ ಘಟನೆ ನಡೆದಿತ್ತು.

ಈ ಕುರಿತ ವೈರಲ್ ವಿಡಿಯೋದಲ್ಲಿ, ತಸ್ಲೀಂ ಅಲೀಗೆ ಥಳಿಸಿದ ಗುಂಪು ಮತ್ತೊಮ್ಮೆ ‘ಹಿಂದೂ ಪ್ರದೇಶ’ ಕ್ಕೆ ಕಾಲಿಡಬೇಡ ಎಂದು ಎಚ್ಚರಿಕೆ ನೀಡಿದ ದೃಶ್ಯವಿತ್ತು. ಈ ವಿಡಿಯೋ ದೇಶದಾದ್ಯಂತ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ತನ್ನ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ತಸ್ಲೀಂ ಅಲೀ ದೂರು ನೀಡಿದ್ದರು. ಇದೇ ವೇಳೆ 13 ವರ್ಷದ ಬಾಲಕಿಯೊಬ್ಬಳು ತಸ್ಲೀಂ ಅಲೀ ವಿರುದ್ದ ಪ್ರತಿದೂರು ದಾಖಲಿಸಿದ್ದರು. ಆ ದೂರು ಆಧರಿಸಿ ತಸ್ಲೀಂ ಅಲೀ ಮೇಲೆ ಪೋಕ್ಸೋ ಮತ್ತು ಐಪಿಸಿಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಜೈಲಿಗಟ್ಟಿದ್ದರು.

ತನ್ನ ಮೇಲೆ ಹಲ್ಲೆ ನಡೆಸಿದ್ದವರ ವಿರುದ್ಧ ಅಲಿ ಬನಗಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐದಾರು ಜನರ ಗುಂಪೊಂದು ತನ್ನ ಹೆಸರನ್ನು ಕೇಳಿ ತನ್ನನ್ನು ಥಳಿಸಿದೆ,ಕೋಮು ನಿಂದನೆಗಳನ್ನು ಮಾಡಿದೆ. ತನ್ನ ಬಳಿಯಿದ್ದ 10,000 ರೂ. ಬೆಲೆಯ ಮೊಬೈಲ್ ಫೋನ್ ಮತ್ತು ಆಧಾರ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಕಿತ್ತುಕೊಂಡಿದೆ ಎಂದು ಹೇಳಿದ್ದರು.

ಅಲೀ ಅವರ ದೂರಿನ ಆಧಾರದಲ್ಲಿ ಪೋಲಿಸರು ನಾಲ್ವರನ್ನು ಬಂಧಿಸಿದ್ದರು. ಆದರೆ, ಇದರ ಬೆನ್ನಲ್ಲೇ 13 ಹರೆಯದ ಬಾಲಕಿ ದೂರು ನೀಡಿದ್ದರಿಂದ, ಪೊಲೀಸರು ಅಲಿ ವಿರುದ್ಧವೇ ಪೊಕ್ಸೊ ಪ್ರಕರಣ ಹೂಡಿ ಜೈಲಿಗೆ ತಳ್ಳಿದ್ದರು.

ವರದಿಗಳ ಪ್ರಕಾರ, ದೂರು ದಾಖಲಿಸಿದ್ದ ಬಾಲಕಿ ಸೇರಿದಂತೆ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿದಿದ್ದರಿಂದ ಇಂದೋರ್ ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ ರಶ್ಮಿ ಬಲ್ಟಾರ್ ಅವರು ತಸ್ಲೀಂ ಅಲಿಯನ್ನು ಖುಲಾಸೆಗೊಳಿಸಿದ್ದಾರೆ ಎಂದು ಅಲೀ ಪರ ವಕೀಲ ಶೇಖ್ ಅಲೀಮ್ ತಿಳಿಸಿದ್ದಾರೆ.

ಖುಲಾಸೆಗೊಂಡ ಬಳಿಕ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಲೀ, “ನನಗೆ ಸಂತೋಷ ಮತ್ತು ದುಃಖ ಎರಡೂ ಆಗಿವೆ. ನನ್ನ ಪರವಾಗಿ ನಿಂತವರಿಗೆ, ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದವರಿಗೆ ಮತ್ತು ನನ್ನನ್ನು ಥಳಿಸಿದವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಧರ್ಮ ಮತ್ತು ನನ್ನ ಹೆಸರಿನ ಕಾರಣದಿಂದಾಗಿ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿತ್ತು” ಎಂದಿದ್ದಾರೆ.

“ನಾನು ಶಾಂತಿ ಬಯಸಿದ್ದೇನೆ, ನಡೆದು ಹೋದ ಘಟನೆಯನ್ನು ಮರೆಯಲು ಬಯಸುತ್ತೇನೆ. ಇಂದೋರ್ ನಗರದ ಬಗ್ಗೆ ನನಗೆ ಯಾವುದೇ ದ್ವೇಷವಿಲ್ಲ. ಅಲ್ಲಿಯ ಎಲ್ಲಾ ನಿವಾಸಿಗಳು ನನ್ನ ಸೋದರ- ಸೋದರಿಯರು. ಜೈಲಿನಲ್ಲಿ ಜೇಲರ್‌ಗಳಾಗಲಿ, ಪೋಲಿಸರಾಗಲಿ ನನಗೆ ಕಿರುಕುಳ ನೀಡಿರಲಿಲ್ಲ. ನಾನು ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ವಿಶ್ವಾಸವನ್ನು ಹೊಂದಿದ್ದೆ” ಎಂದು ಹೇಳಿದ್ದಾರೆ.

“ಡಿಸೆಂಬರ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದಾಗ ನಾನು ಮತ್ತೊಮ್ಮೆ ಇಂದೋರ್‌ನ ಬೀದಿಗೆ ಹೋಗಿದ್ದೆ. ಆ ವೇಳೆ ನನ್ನಲ್ಲಿ ಭಯ ಆವರಿಸಿತ್ತು. ನನಗೆ ಆರು ಮಕ್ಕಳಿದ್ದಾರೆ. ಅವರ ಹೊಟ್ಟೆ ತುಂಬಿಸಬೇಕಿದೆ. ಹಾಗಾಗಿ, ನಾನು ಮತ್ತೆ ಇಂದೋರ್‌ಗೆ ಹೋಗುತ್ತೇನೆ. ಯುಪಿಯಿಂದ ಪಂಜಾಬ್, ಇಂದೋರ್‌ನ ಬೀದಿಗಳಿಗೆ ತೆರಳಿ ಜಾತ್ರೆ, ಮೇಳಗಳಲ್ಲಿ ಬಳೆ ವ್ಯಾಪಾರ ಮಾಡುವುದೇ ನನ್ನ ಕಾಯಕ. ನನ್ನ ತಂದೆ, ಅಜ್ಜ ಕೂಡ ಇದನ್ನೇ ಮಾಡಿದ್ದರು” ಎಂದು ತಸ್ಲೀಂ ಅಲೀ ತಿಳಿಸಿದ್ದಾರೆ

ವರದಿಗಳ ಪ್ರಕಾರ, ಮುಸ್ಲಿಂ ವ್ಯಾಪಾರಿಯಾದ ತಸ್ಲೀಂ ಅಲೀ ತನ್ನ ಹೆಸರನ್ನು ಮರೆಮಾಚಿ ‘ಗೋಲು ಸಿಂಗ್’ ಎಂಬ ಹೆಸರಿನಲ್ಲಿ ಹಿಂದೂ ಪ್ರದೇಶಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಲಾಗಿದೆ. ಅಸಲಿಗೆ ‘ಗೋಲು’ ಎಂಬುವುದು ತಸ್ಲೀಂ ಅವರ ಊರಿನ ಅಥವಾ ನಿಕ್ ನೇಮ್ ಆಗಿದೆ. ಸಿಂಗ್ ಎನ್ನುವುದು ತಂದೆಯ ಹೆಸರಿನಿಂದ ಬಂದಿದೆ. ತಸ್ಲೀಂ ಅವರ ತಂದೆಯ ಹೆಸರು ಮೊಹರ್ ಅಲೀ. ದಾಖಲೆಗಳಲ್ಲಿ ಅದು ತಪ್ಪಾಗಿ ‘ಮೊಹರ್ ಸಿಂಗ್’ ಎಂದು ಬಂದಿತ್ತು. ನಂತರ ಅದು ಮೊಹರ್ ಅವರ ಮಗ ತಸ್ಲೀಂ ಆಧಾರ್ ಕಾರ್ಡ್‌ನಲ್ಲೂ ಹಾಗೇಯೇ ಮುಂದುವರೆದಿದೆ. ನ್ಯಾಯಾಲಯ ಕೂಡ ಈ ಅಂಶವನ್ನು ಗಮನಿಸಿದೆ. ಪ್ರಾಸಿಕ್ಯೂಷನ್ ತಸ್ಲೀಂ ಅಲೀಯ ಅಪರಾಧವನ್ನು ರುಜುವಾತು ಮಾಡುವಲ್ಲಿ ವಿಫಲವಾಗಿದೆ.

ತಸ್ಲೀಂ ಅಲೀ ಖುಲಾಸೆಗೊಂಡಿರುವ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್, “ಅಲೀ ಅವರು ಹಲ್ಲೆಗೊಳಗಾದಾಗ ನ್ಯೂಸ್‌ ಚಾನೆಲ್‌ಗಳು ‘ಲವ್‌ ಜಿಹಾದ್’ ಎಂಬ ಶೀರ್ಷಿಕೆ ಕೊಟ್ಟು ಸುದ್ದಿ ಮಾಡಿತ್ತು. ಈಗ ಅವರು ಎಲ್ಲಾ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಎಷ್ಟು ಚಾನೆಲ್‌ಗಳು ಸುದ್ದಿ ಮಾಡಿವೆ? ಎಂದು ಪ್ರಶ್ನಿಸಿದ್ದಾರೆ.

ಅವತ್ತು ‘ಬಳೆ ನೆಪ..ಲವ್ ಜಿಹಾದ್ ಗುರಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನೀವು ಖುಲಾಸೆಗೊಂಡ ಬಗ್ಗೆ ಸುದ್ದಿ ಮಾಡಿದ್ದೀರಾ? ಎಂದು ನ್ಯೂಸ್ 18 ಮಧ್ಯ ಪ್ರದೇಶ, ಉತ್ತರಾಖಂಡ ಚಾನೆಲ್‌ಗೆ ಕೇಳಿದ್ದಾರೆ.

ಇದನ್ನೂ ಓದಿ : ಸಂಭಾಲ್ ನಂತರ ಮತ್ತೊಂದು ವಿವಾದ: ಜಾಮಾ ಮಸೀದಿಯ ಮಾಲೀಕತ್ವಕ್ಕಾಗಿ ನ್ಯಾಯಾಲಯದ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...