Homeಮುಖಪುಟಪಕ್ಷದ ದೆಹಲಿ ನಾಯಕರಿಗೆ ಪಂಜಾಬ್‌ನಲ್ಲಿ ಪ್ರಮುಖ ಹುದ್ದೆ: ಎಎಪಿ ವಿರುದ್ಧ ಪ್ರತಿಪಕ್ಷಗಳ ಟೀಕೆ

ಪಕ್ಷದ ದೆಹಲಿ ನಾಯಕರಿಗೆ ಪಂಜಾಬ್‌ನಲ್ಲಿ ಪ್ರಮುಖ ಹುದ್ದೆ: ಎಎಪಿ ವಿರುದ್ಧ ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಪಂಜಾಬ್ ಸರ್ಕಾರವು ಕೆಲವು ಪ್ರಮುಖ ಹುದ್ದೆಗಳಿಗೆ ಪಕ್ಷದ ದೆಹಲಿಯ ನಾಯಕರನ್ನು ಸರಣಿಯಾಗಿ ನೇಮಕಾತಿ ಮಾಡಿರುವುದು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದ್ದು, ರಾಜ್ಯದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಪಕ್ಷದ ದೆಹಲಿ ನಾಯಕರಿಗೆ

ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ವಿಶೇಷ ಕರ್ತವ್ಯ ಅಧಿಕಾರಿ (OSD) ಶಲೀನ್ ಮಿತ್ರ ಅವರನ್ನು ಪಂಜಾಬ್ ಆರೋಗ್ಯ ಸಚಿವ ಡಾ. ಬಲ್ಬೀರ್ ಸಿಂಗ್ ಅವರ OSD ಆಗಿ ನೇಮಿಸಲಾಗಿದೆ. ದೆಹಲಿಯ ಇಬ್ಬರು ನಾಯಕಿಯರಾದ ರೀನಾ ಗುಪ್ತಾ ಮತ್ತು ದೀಪಕ್ ಚೌಹಾಣ್ ಅವರನ್ನು ಕ್ರಮವಾಗಿ ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪಂಜಾಬ್ ದೊಡ್ಡ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಈ ನೇಮಕಾತಿಗಳ ಬಗ್ಗೆ ವಿರೋಧ ಪಕ್ಷವು ಸರ್ಕಾರವನ್ನು ಪ್ರಶ್ನಿಸಿದ್ದು, ರಾಜ್ಯದ ಹೊರಗಿನ ವ್ಯಕ್ತಿಗಳನ್ನು ಪ್ರಮುಖ ಆಡಳಿತಾತ್ಮಕ ಪಾತ್ರಗಳಲ್ಲಿ ನೇಮಿಸುವುದು ಪಂಜಾಬಿ ಗೌರವಕ್ಕೆ ಹಾನಿ ಮಾಡುತ್ತಿದೆ ಎಂದು ಹೇಳಿದೆ. ಮುಖ್ಯಮಂತ್ರಿ ಭಗವಂತ್ ಮಾನ್ “ಪಂಜಾಬ್ ಅನ್ನು ದೆಹಲಿ ನಾಯಕತ್ವಕ್ಕೆ ಶರಣಾಗಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಶಲೀನ್ ಮಿತ್ರ ಅವರು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ನ ಯೋಜನಾ ವ್ಯವಸ್ಥಾಪಕರೂ ಆಗಿದ್ದವರು. ಪಂಜಾಬ್ ಆರೋಗ್ಯ ಸಚಿವ ಡಾ. ಬಲ್ಬೀರ್ ಸಿಂಗ್ ಅವರೊಂದಿಗೆ ಮಿತ್ರಾ ಅವರು ಕುಳಿತಿರುವ ಸಭೆಯ ಛಾಯಾಚಿತ್ರ ನಿನ್ನೆ ವೈರಲ್ ಆಗಿದೆ.

ಕಳೆದ ತಿಂಗಳು, ಎಎಪಿ ದೆಹಲಿಯ ವಕ್ತಾರೆ ಮತ್ತು ಪಕ್ಷದ ದೆಹಲಿ ಘಟಕದ ಮಾಜಿ ಕಾರ್ಯದರ್ಶಿಯಾಗಿದ್ದ ರೀನಾ ಗುಪ್ತಾ, ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿಯ (ಪಿಪಿಸಿಬಿ) ಅಧ್ಯಕ್ಷೆಯಾಗಿ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ಈ ಹಿಂದೆ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್ ಅವರೊಂದಿಗೆ ಕೆಲಸ ಮಾಡಿದ್ದರು. ಎರಡೂ ನೇಮಕಾತಿಗಳು ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದವು.

“ಪಂಜಾಬ್ ಅನ್ನು ದೆಹಲಿಯಿಂದ ‘ರಿಮೋಟ್-ಕಂಟ್ರೋಲ್ಡ್’ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ.

“ಎಎಪಿ ಸರ್ಕಾರ ದೆಹಲಿಯ ನಾಯಕ ಸತ್ಯೇಂದ್ರ ಜೈನ್ ಅವರ ಪಿಎ ಶಲೀನ್ ಮಿತ್ರ ಅವರನ್ನು ಪಂಜಾಬ್ ಸಂಪುಟ ಸಚಿವ ಡಾ. ಬಲ್ಬೀರ್ ಸಿಂಗ್ ಅವರಿಗೆ OSD ಆಗಿ ನೇಮಿಸಿದೆ. ಪಂಜಾಬ್ ಅನ್ನು ದೆಹಲಿಯಿಂದ ರಿಮೋಟ್-ಕಂಟ್ರೋಲ್ಡ್ ಏಕೆ ಮಾಡಲಾಗುತ್ತಿದೆ? ಪಂಜಾಬಿಗಳಿಗೆ ಉದ್ಯೋಗಗಳು ಅಥವಾ ದೆಹಲಿ ಸಹಾಯಕರಿಗೆ ಬಹುಮಾನಗಳು? ಬಲವಂತ್ ಮಾನ್ ಅವರು ಪಂಜಾಬ್ ಅನ್ನು ದೆಹಲಿ ವಾಲಾಗಳಿಗೆ ಬಿಟ್ಟುಕೊಟ್ಟರು,” ಎಂದು ಬಜ್ವಾ ಎಕ್ಸ್‌ನಲ್ಲಿ ಬರೆದಿದ್ದಾರೆ.

ಅಲ್ಲದೆ, ಕಾಂಗ್ರೆಸ್ ಶಾಸಕ ಸುಖ್‌ಪಾಲ್ ಖೈರಾ ಕೂಡಾ ಈ ಬಗ್ಗೆ ಪ್ರಶ್ನಿಸಿದ್ದು, “ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಅವರು ವೀಡಿಯೊ 125 ರ ಪ್ರಕಾರ ವಿವರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಪಂಜಾಬ್‌ನ ವಿವಿಧ ಇಲಾಖೆಗಳು ಮತ್ತು ಮಂತ್ರಿಗಳ ಮೇಲೆ ನಿಗಾ ಇಡಲು ದೆಹಲಿಯಿಂದ ನಿಯೋಜಿತರಾಗಿರುವ ಆಮ್ ಆದ್ಮಿ ಪಕ್ಷದ ಜನರು ತಮ್ಮ ಸಂಬಳ, ಸವಲತ್ತುಗಳು ಮತ್ತು ಮನೆ, ಆರೈಕೆ, ಇಂಧನ ಮುಂತಾದ ಇತರ ದೈನಂದಿನ ಖರ್ಚುಗಳನ್ನು ಎಲ್ಲಿಂದ ಪಡೆಯುತ್ತಿದ್ದಾರೆ? ಈ ಹಣವು ಭ್ರಷ್ಟ ವಿಧಾನಗಳ ಮೂಲಕ ಗಳಿಸಿದ ಎಲ್ಲಾ ಅಕ್ರಮ ಸಂಪತ್ತಿನಿಂದ ಬರುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದಕ್ಕೂ ಮೊದಲು ಮತ್ತೊಂದು ಹೇಳಿಕೆಯಲ್ಲಿ ಅವರು, “ಆರೋಗ್ಯ ಸಚಿವ ಬಲ್ಬೀರ್ ಅವರ ಒಎಸ್‌ಡಿ ಆಗಿ ಶಲೀನ್ ಮಿತ್ರಾ ಅವರನ್ನು ನೇಮಕ ಮಾಡುವ ಮೂಲಕ  ಅರವಿಂದ್ ಕೇಜ್ರಿವಾಲ್ ಪಂಜಾಬ್ ಸರ್ಕಾರವನ್ನು ರಿಮೋಟ್-ಕಂಟ್ರೋಲ್ ಮಾಡುತ್ತಿದ್ದಾರೆ. ಅವರು ಪಂಜಾಬ್‌ನ ಎಲ್ಲಾ ಪ್ರಮುಖ ಹುದ್ದೆಗಳನ್ನು ನಿಧಾನವಾಗಿ ವಶಪಡಿಸಿಕೊಂಡಿದ್ದಾರೆ. ಸಿಎಂ ಭಗವಂತ್ ಮಾನ್ ಕೇವಲ ‘ಡಮ್ಮಿ’ ಆಗಿದ್ದು, ಅವರು ಜೋಕ್‌ಗಳನ್ನು ಹೇಳಲು, ನೃತ್ಯ ಮಾಡಲು, ರಿಬ್ಬನ್‌ಗಳನ್ನು ಕತ್ತರಿಸಲು, ಅವರ ಭದ್ರತೆಯನ್ನು ಆನಂದಿಸಲು ಮಾತ್ರ ಇದ್ದಾರೆ” ಎಂದು ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳ ಕೂಡಾ ಈ ಅವಕಾಶವನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, “ಮತ್ತೊಂದು ಆಘಾತಕಾರಿ ಬೆಳವಣಿಗೆ. ಜೈಲಿನಲ್ಲಿರುವ ದೆಹಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರ ಒಎಸ್‌ಡಿ ಶಲೀನ್ ಮಿತ್ರ ಈಗ ಪಂಜಾಬ್ ಆರೋಗ್ಯ ಸಚಿವರಿಗೆ ಒಎಸ್‌ಡಿ ಆಗಿರುತ್ತಾರೆ. ಇದರರ್ಥ ಈ ಸಚಿವಾಲಯವನ್ನು ದೆಹಲಿಯ ಭ್ರಷ್ಟ ಎಎಪಿ ನಾಯಕತ್ವವು ವಹಿಸಿಕೊಂಡಿದೆ.” ಎಂದು ಹೇಳಿದೆ.

“ಅಧಿಕಾರದಿಂದ ಹೊರಹಾಕುವ ಕ್ಷಣಗಣನೆ ಪ್ರಾರಂಭವಾಗಿದೆ ಎಂದು ಚೆನ್ನಾಗಿ ತಿಳಿದಿದ್ದರೂ, ಎಎಪಿ ನಾಯಕತ್ವವು ಪಂಜಾಬ್‌ನ ಲೂಟಿಯನ್ನು ತ್ವರಿತಗೊಳಿಸಲು ಬಯಸುತ್ತಿದೆ ಎಂದು ತೋರುತ್ತದೆ. ಶಿರೋಮಣಿ ಅಕಾಲಿ ದಳವು ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡ ನಂತರ ಪ್ರತಿಯೊಂದು ಭ್ರಷ್ಟಾಚಾರ ಕೃತ್ಯವನ್ನು ಬಹಿರಂಗಪಡಿಸಲು ಮತ್ತು ಶಿಕ್ಷಿಸಲು ಬದ್ಧವಾಗಿದೆ.” ಎಂದು ಪಕ್ಷ ಹೇಳಿದೆ.

ಅದಾಗ್ಯೂ, ಆಡಳಿತಾರೂಢ ಎಎಪಿ ತನ್ನ ನಿರ್ಧಾರನ್ನು ಸಮರ್ಥಿಸಿಕೊಂಡಿದ್ದು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದೆ. ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಚೀಮಾ ಪ್ರತಿಕ್ರಿಯಿಸಿ, “ಪ್ರಶಾಂತ್ ಕಿಶೋರ್ ಅವರನ್ನು ಮುಖ್ಯಮಂತ್ರಿಯ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿದ್ದು ‘ಪಂಜಾಬ್‌ನ ಗೌರವ’ಕ್ಕೆ ಹೊಡೆತವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಅವರ ಆಡಳಿತದಲ್ಲಿ ಹೊರಗಿನವರಿಗೆ ಯಾವುದೇ ಹೊಣೆಗಾರಿಕೆ, ಪ್ರಶ್ನೆಗಳಿಲ್ಲದೆ ಅಧಿಕಾರ ವಹಿಸಲಾಯಿತು. ಅಂತಹ ಪ್ರತಾಪ್ ಸಿಂಗ್ ಬಜ್ವಾ ಈಗ OSD ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ, ಇದು ಶುದ್ಧ ಬೂಟಾಟಿಕೆ. ಎಎಪಿ ಆಡಳಿತವನ್ನು ನೀಡಲು ಇಲ್ಲಿದ್ದು, ಹೊರಗುತ್ತಿಗೆ ನೀಡಲು ಅಲ್ಲ.” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ಪ್ರಶಾಂತ್ ಕಿಶೋರ್ ಅವರನ್ನು ಪಂಜಾಬ್‌ನ ವಾಸ್ತವಿಕ ಮುಖ್ಯಮಂತ್ರಿಯನ್ನಾಗಿ ಮಾಡಿದಾಗ, ಒಂದೇ ಒಂದು ಪ್ರಶ್ನೆಯೂ ಉದ್ಭವಿಸಲಿಲ್ಲ. ಆಗ ಯಾವುದೇ ಹೊಣೆಗಾರಿಕೆಯೂ ಇರಲಿಲ್ಲ. ಯಾವುದೇ ಪ್ರತಿಭಟನೆ ನಡೆದಿಲ್ಲ. ಆಗ ಪ್ರತಾಪ್ ಸಿಂಗ್ ಬಜ್ವಾ ಮೌನವಾಗಿದ್ದರು” ಎಂದು ಅವರು ಹೇಳಿದ್ದಾರೆ.

“ಪಾಕಿಸ್ತಾನಿ ಏಜೆಂಟ್ ಅರುಸಾ ಆಲಂ, ಕಾಂಗ್ರೆಸ್ ಆಳ್ವಿಕೆಯಲ್ಲಿ ಸಿಎಂ ಕಚೇರಿಗೆ ಮುಕ್ತ ಪ್ರವೇಶವನ್ನು ಹೊಂದಿದ್ದರು. ಅವರ ‘ಅನುಮೋದನೆ’ ಇಲ್ಲದೆ ಯಾವುದೇ ಫೈಲ್‌ಗಳೂ ಚಲಿಸುತ್ತಿರಲಿಲ್ಲ. ಛತ್ತೀಸ್‌ಗಢದ ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಪಂಜಾಬ್‌ನ ಕಾಂಗ್ರೆಸ್ ಪ್ರಭಾರಿ ಆಗಿದ್ದಾರೆ. ಇದು ಪಂಜಾಬ್ ಕಾಂಗ್ರೆಸ್ ರಿಮೋಟ್ ಕಂಟ್ರೋಲ್‌ನಲ್ಲಿದೆ ಎಂಬ ಸ್ಪಷ್ಟ ಸಂದೇಶ.” ಎಂದು ಎಎಪಿ ನಾಯಕ ಹೇಳಿದ್ದಾರೆ.

“ಇದು ಕೇವಲ ಆಡಳಿತದ ಬಗ್ಗೆ ಅಲ್ಲ. ಇದು ಕಾಂಗ್ರೆಸ್‌ನ ಅರ್ಹತೆಯ ಬಗ್ಗೆಗಿನ ವಿಚಾರವಾಗಿದೆ. ಎಎಪಿ ಕಾಂಗ್ರೆಸ್ ಅಲ್ಲ. ನಾವು ಪಂಜಾಬ್ ಅನ್ನು ಹೊರಗುತ್ತಿಗೆ ನೀಡುವುದಿಲ್ಲ, ನಾವು ಪಂಜಾಬಿಗಳಿಗೆ ಅಧಿಕಾರ ನೀಡುತ್ತೇವೆ. ನಾವು ವ್ಯವಸ್ಥೆಗಳನ್ನು ನಿರ್ಮಿಸುತ್ತಿದ್ದೇವೆ, ಸಿಕೋಫಾನ್ಸಿ ಅಲ್ಲ.” ಎಂದು ಅವರು ಹೇಳಿದ್ದಾರೆ. ಪಕ್ಷದ ದೆಹಲಿ ನಾಯಕರಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಶಿಕ್ಷಣ ನಿಧಿ ತಡೆಹಿಡಿದ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಲಿದ್ದೇವೆ: ಸಿಎಂ ಸ್ಟಾಲಿನ್

ಶಿಕ್ಷಣ ನಿಧಿ ತಡೆಹಿಡಿದ ಕೇಂದ್ರದ ವಿರುದ್ಧ ಸುಪ್ರಿಂಕೋರ್ಟ್‌ ಮೆಟ್ಟಿಲೇರಲಿದ್ದೇವೆ: ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...