Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...