Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...