Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...