Homeಎಕಾನಮಿ1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತವು ಕೊರೋನಾ ಬಿಕ್ಕಟ್ಟನ್ನು ನಿಭಾಯಿಸಿ ಪ್ರಪಂಚ ಮಟ್ಟದಲ್ಲಿ ತಲೆಯೆತ್ತಿ ನಿಲ್ಲಲು ಮತ್ತು ಜನರ ಹಿತ ಕಾಪಾಡಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಬೇಕು ಎಂಬ ಅಭಿಯಾನ ಆರಂಭವಾಗಿದೆ.

ಮೇಧಾ ಪಾಟ್ಕರ್, ಅರುಣಾ ರಾಯ್‌, ಪ್ರೊ.ಅನಿಲ್‌ ಸದ್ಗೋಪಾಲ್‌, ನ್ಯಾಯಾಧೀಶ ಬಿ ಜಿ ಕೋಲ್ಸೆ ಪಾಟೀಲ್ ಸೇರಿದಂತೆ ಹಲವರು ಆರಂಭಿಸಿರುವ ಈ ಅಭಿಯಾನದಲ್ಲಿ ’2020 ಮೇ 1 ರ ಸಂಪತ್ತಿನ ತೆರಿಗೆ ಪಿಟಿಷನ್‌ಗೆ’ ಸಹಿ ಮಾಡುವ ಮೂಲಕ ಪಾಲ್ಗೊಳ್ಳಿ ಎಂದು ಕರ್ನಾಟಕದ ದೇವನೂರು ಮಹಾದೇವ, ಎ.ಆರ್‌ ವಾಸವಿ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ.

ಭಾರತವು ಕಲ್ಯಾಣರಾಜ್ಯ (Welfare State)ಕಡೆಗೆ ಚಲಿಸಬೇಕೆಂಬ ಆಶಯಗಳು ಇದ್ದಾಗ 1957ರಲ್ಲೇ ಸಂಪತ್ತಿನ ಮೇಲೆ ತೆರಿಗೆ ಪರಿಕಲ್ಪನೆ ಜಾರಿಯಲ್ಲಿತ್ತಾದರೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿರಲಿಲ್ಲ. ಆದರೆ, 1991ರ ನಂತರ ಮಾರುಕಟ್ಟೆ ಶಕ್ತಿಗಳು ಆಳ್ವಿಕೆಯನ್ನು ನಿಯಂತ್ರಿಸತೊಡಗಿದ ಪರಿಣಾಮವಾಗಿ 2015 ರಲ್ಲಿ ಕೇಂದ್ರ ಸರ್ಕಾರವು ಸಂಪತ್ತಿನ ಮೇಲಿನ ತೆರಿಗೆ ಪರಿಕಲ್ಪನೆಯನ್ನೇ ರದ್ದುಮಾಡಿಬಿಟ್ಟಿತು. ಆದರೀಗ, ಒಂದು ಲಕ್ಷ ದಾಟಿ ಓಡುತ್ತಿರುವ ಕೊರೋನಾ ಸೋಂಕಿನ ದಾಳಿಯಿಂದ ತತ್ತರಿಸುತ್ತಿರುವ ಭಾರತವು ಚೇತರಿಸಿಕೊಳ್ಳುವಂತಾಗಲು 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿಯಾದರೂ ಆರ್ಥಿಕತೆಯನ್ನು ತಹಬಂದಿಗೆ ತರುವುದು ಇಂದಿನ ತುರ್ತಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್‌ಜಿಯವರು ಈಗಾಗಲೇ ತಮ್ಮ ಒಟ್ಟು ಸಂಪತ್ತಿನ ಶೇ. 2% ರಷ್ಟನ್ನು ಕೊರೋನಾ ಬಿಕ್ಕಟ್ಟಿನ ನಿವಾರಣೆಗಾಗಿ ಬಿಟ್ಟುಕೊಟ್ಟಿರುವುದನ್ನು ಗಮನಿಸಿ ಹೇಳುವುದಾದರೆ ಈ ಸಾಧ್ಯತೆ ಅಂತಹ ಕಷ್ಟದಾಯಕವಾದುದ್ದೇನೂ ಅಲ್ಲ. ಈ ವಿಚಾರದಲ್ಲಿ ಜನರಿಂದ ಆಯ್ಕೆಯಾದ ಮತ್ತು ಶಕ್ತಿಯುತವಾದ ಯಾವುದೇ ಸರ್ಕಾರವು ಹಿಂದೆ-ಮುಂದೆ ನೋಡದೆ ತುಂಬಾ ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಚಿಂತಕರು ಒತ್ತಾಯಿಸಿದ್ದಾರೆ.

ಇಂದಿನ ಕೊರೋನಾ ಬಿಕ್ಕಟ್ಟಿನ ಭಯಂಕರ ಪರಿಸ್ಥಿತಿಯನ್ನು ಎದುರಿಸಲು ಇತ್ತೀಚೆಗೆ, ನಮ್ಮ ಪ್ರಧಾನ ಮಂತ್ರಿಗಳು ಘೋಷಿಸಿರುವ 20 ಲಕ್ಷಕೋಟಿ ಪ್ಯಾಕೇಜ್‌ನ ಒಳಹೊಕ್ಕು ನೋಡಿದರೆ, ಇದರಲ್ಲಿ ಎಲ್ಲಾ ಕೂಡಿ ಕಳೆದು ವಾಸ್ತವವಾಗಿ ಸರ್ಕಾರ ಕೋವಿಡ್‌ನ ಆರ್ಥಿಕ ಮುಗ್ಗಟ್ಟು ಎದುರಿಸಲು ವಾಸ್ತವವಾಗಿ ಘೋಷಿಸಿರುವುದು ಹೆಚ್ಚೆಂದರೆ 2 ಲಕ್ಷಕೋಟಿ ರೂಪಾಯಿಗಳಾಗಬಹುದಷ್ಟೆ. ಹೀಗೆಂದೇ ಎಲ್ಲಾ ಆರ್ಥಿಕ ತಜ್ಞರೂ, ವಿವಿಧ ಬ್ಯಾಂಕಿನ ಮುಖ್ಯಸ್ಥರೂ ಹೇಳುತ್ತಿದ್ದಾರೆ. ಸರ್ಕಾರವೂ ಇದನ್ನು ನಿರಾಕರಿಸಿಲ್ಲ. ವಾಸ್ತವ ಹೀಗಿರುವಾಗ, ಈ ಕೊರೋನ ದುರಂತ ಸಂದರ್ಭದಲ್ಲಿನ ಸಮಾಜೋ-ಆರ್ಥಿಕ ಬಿಕ್ಕಟ್ಟನ್ನು ನಿಜವಾಗಿ, ಯಶಸ್ವಿಯಾಗಿ ಮತ್ತು ಮಾನವೀಯವಾಗಿ ನಿರ್ವಹಿಸುವ ಸಲುವಾಗಿ ದೇಶದ 1% ಅತಿಶ್ರೀಮಂತರಿಗೆ ಸಂಪತ್ತಿನ ಮೇಲೆ 2%, ಸಂಪತ್ತಿನ ತೆರಿಗೆ ಜಾರಿಗೆ ತನ್ನಿ ಎಂಬ ಹಕ್ಕೊತ್ತಾಯ ನ್ಯಾಯಯುತವಾದುದು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ದೇಶದ ಪ್ರಜ್ಞಾವಂತರು 2020 ಮೇ 1 ರಂದು ಪಿಟಿಷನ್ ಹಾಕಿದ್ದಾರೆ. ಅದಕ್ಕೆ ಕರ್ನಾಟಕ ಜನತೆ ಸಹಿ ಮಾಡಿ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದ ಪ್ರವರ್ತಕರಾಗಿ ಪತ್ರಿಕಾ ಹೇಳಿಕೆಗೆ ಎ. ಆರ್. ವಾಸವಿ, ವಿ.ಕೆ.ನಟರಾಜ್, ಟಿ.ಆರ್. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ದೇವನೂರ ಮಹಾದೇವ, ಎಸ್. ಆರ್, ಹಿರೇಮಠ್, ದು. ಸರಸ್ವತಿ, ಚುಕ್ಕಿ ನಂಜುಂಡಸ್ವಾಮಿ, ರೂಪ ಹಾಸನ, ಸಪ್ತಗಿರಿ ಐಯ್ಯಂಗಾರ್, ಎ. ನಾರಾಯಣ, ಕೆ.ಸಿ.ರಘು, ಪ್ರಕಾಶ ಕಮ್ಮರಡಿ, ಡಾ. ರಜಾಕ್ ಉಸ್ತಾದ್ ಸಹಿ ಹಾಕಿದ್ದಾರೆ.

ಈ ಆಂದೋಲನಕ್ಕೆ ನೀವೂ ಸಹಿ ಮಾಡಿ ಬೆಂಬಲ ಸೂಚಿಸುವುದಿದ್ದರೆ ಇಲ್ಲಿ ಕ್ಲಿಕ್‌ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...