Homeಮುಖಪುಟ'ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ..'; ಪ್ರಧಾನಿ ಮೋದಿಗೆ...

‘ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ..’; ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸವಾಲು

- Advertisement -
- Advertisement -

“ಸ್ವಲ್ಪ ಧೈರ್ಯ ತೋರಿಸಿ, ಭಾರತೀಯ ರಫ್ತಿನ ಮೇಲಿನ ಶೇ. 50 ರಷ್ಟು ಸುಂಕಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ” ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಡಿಸೆಂಬರ್ 31, 2025 ರವರೆಗೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲೆ ಶೇ. 11 ರಷ್ಟು ಸುಂಕವನ್ನು ವಿನಾಯಿತಿ ನೀಡುವ ಕೇಂದ್ರದ ನಿರ್ಧಾರವು ಭಾರತೀಯ ಹತ್ತಿ ರೈತರಿಗೆ ಹಾನಿ ಮಾಡುತ್ತದೆ ಎಂದು ಹೇಳಿದ್ದಾರೆ. ಇದು ಅಮೆರಿಕದ ರೈತರನ್ನು ಶ್ರೀಮಂತರನ್ನಾಗಿ ಮತ್ತು ಗುಜರಾತ್ ಬೆಳೆಗಾರರನ್ನು ಬಡವರನ್ನಾಗಿ ಮಾಡುತ್ತದೆ ಎಂದು ಅವರು ಹೇಳಿದರು.

ಜವಳಿ ಉದ್ಯಮವನ್ನು ಬೆಂಬಲಿಸಲು ಮತ್ತು ಇನ್ಪುಟ್ ವೆಚ್ಚವನ್ನು ಕಡಿಮೆ ಮಾಡಲು ಭಾರತವು ಪ್ರಸ್ತುತ ಈ ವರ್ಷ ಡಿಸೆಂಬರ್ 31 ರವರೆಗೆ ಕಚ್ಚಾ ಹತ್ತಿಗೆ ಆಮದು ಸುಂಕ ವಿನಾಯಿತಿಯನ್ನು ಹೊಂದಿದೆ.

“ಪ್ರಧಾನಮಂತ್ರಿಯವರು ಧೈರ್ಯ ತೋರಿಸಬೇಕೆಂದು ನಾವು ಒತ್ತಾಯಿಸುತ್ತೇವೆ; ಇಡೀ ದೇಶವು ನಿಮ್ಮ ಬೆನ್ನಿಗೆ ನಿಂತಿದೆ. ಭಾರತದಿಂದ ರಫ್ತಿನ ಮೇಲೆ ಅಮೆರಿಕ ಶೇ. 50 ರಷ್ಟು ಸುಂಕ ವಿಧಿಸಿದೆ. ಅಮೆರಿಕದಿಂದ ಬರುವ ಆಮದಿನ ಮೇಲೆ ನೀವು ಶೇ. 75 ರಷ್ಟು ಸುಂಕ ವಿಧಿಸುತ್ತೀರಿ, ದೇಶ ಅದನ್ನು ಭರಿಸಲು ಸಿದ್ಧವಾಗಿದೆ. ಅದನ್ನು ಹೇರಿದರೆ ಸಾಕು. ನಂತರ ಟ್ರಂಪ್ ತಲೆಬಾಗುತ್ತಾರೋ ಇಲ್ಲವೋ ಎಂದು ನೋಡಿ” ಎಂದು ಕೇಜ್ರಿವಾಲ್ ಹೇಳಿದರು.

ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲೆ ಶೇ. 11 ರಷ್ಟು ಸುಂಕ ವಿಧಿಸಬೇಕು, ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕು. 20 ಕೆಜಿಗೆ ರೂ. 2,100 ರಂತೆ ಹತ್ತಿಯನ್ನು ಖರೀದಿಸಬೇಕು, ಜೊತೆಗೆ ಭಾರತೀಯ ರೈತರಿಗೆ ಸಹಾಯ ಮಾಡಲು ರಸಗೊಬ್ಬರಗಳು ಮತ್ತು ಬೀಜಗಳ ಮೇಲೆ ಸಬ್ಸಿಡಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಭಾರತದ ರೈತರಿಗೆ ಸಹಾಯ ಮಾಡಲು ಅಮೆರಿಕದ ಶೇ. 50 ರಷ್ಟು ಸುಂಕವು ವಜ್ರ ಕಾರ್ಮಿಕರ ಮೇಲೂ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ. ಏಕೆಂದರೆ, ಮೋದಿ ಸರ್ಕಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೆ ‘ಮೊಣಕಾಲುಗಳ ಮೇಲೆ ನಿಂತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಹತ್ತಿಯ ಮೇಲಿನ ಆಮದು ಸುಂಕ ವಿನಾಯಿತಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸುವ ನಿರ್ಧಾರವು ರಫ್ತು ಮಾರುಕಟ್ಟೆಗಳಲ್ಲಿ ಭಾರತದ ಸ್ಥಾನವನ್ನು ಬಲಪಡಿಸುತ್ತದೆ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ರಫ್ತುಆಧಾರಿತ ಘಟಕಗಳಿಗೆ ಆದೇಶಗಳನ್ನು ಪುನರುಜ್ಜೀವನಗೊಳಿಸುತ್ತದೆ ಎಂದು ಕೇಂದ್ರವು ಕಳೆದ ತಿಂಗಳು ಹೇಳಿದೆ.

ಭಾರತೀಯ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇ. 50 ರಷ್ಟು ಸುಂಕಗಳು ಜಾರಿಗೆ ಬಂದಿರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮೆರಿಕವು ದೇಶದ ಜವಳಿ ಮತ್ತು ಉಡುಪು ರಫ್ತಿಗೆ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿದೆ.

ಸುರೇಂದ್ರನಗರ ಜಿಲ್ಲೆಯ ಚೋಟಿಲಾದಲ್ಲಿ ನಡೆದ ‘ಕಿಸಾನ್ ಮಹಾಪಂಚಾಯತ್’ನಲ್ಲಿ ಭಾಗವಹಿಸಲು ಕೇಜ್ರಿವಾಲ್ ಗುಜರಾತ್‌ನಲ್ಲಿದ್ದರು, ಆ ಸಮಯದಲ್ಲಿ ಭಾರೀ ಮಳೆಯಿಂದಾಗಿ ಅದನ್ನು ಮುಂದೂಡಲಾಯಿತು.

ಟ್ರಂಪ್ ಭಾರತದ ಮೇಲೆ ಶೇ. 50 ರಷ್ಟು ಸುಂಕವನ್ನು ವಿಧಿಸಿದಾಗ, ಮೋದಿ ಪ್ರತಿಯಾಗಿ ಅದನ್ನು ಹೆಚ್ಚಿಸಲಿಲ್ಲ. ಬದಲಿಗೆ (ಅಮೆರಿಕದಿಂದ ಹತ್ತಿ ಆಮದಿನ ಮೇಲೆ) ಶೇ. 11 ರಷ್ಟು ಕಡಿಮೆ ಮಾಡಿದರು. ಪ್ರಧಾನಿ ಏಕೆ ಬಾಗಿದದರು? ದುರ್ಬಲರಾದರು ಎಂದು ಕೇಜ್ರಿವಾಲ್ ಪ್ರಶ್ನಿಸಿದರು.

ಭಾರತವು ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿನ ಜನರು ಮೋದಿಯ ಬೆಂಬಲಕ್ಕೆ ನಿಂತಿದ್ದಾರೆ ಎಂದು ಅವರು ಹೇಳಿದರು.

“ಇಡೀ ದೇಶ ಮೋದಿಜಿಯ ಹಿಂದೆ ನಿಂತಿದೆ. ಅವರು (ಟ್ರಂಪ್) ಶೇ. 50 ರಷ್ಟು ಸುಂಕ ವಿಧಿಸಿದರು, ಮೋದಿಜಿ ಹತ್ತಿಯ ಮೇಲೆ ಶೇ. 100 ರಷ್ಟು ಸುಂಕ ವಿಧಿಸಬೇಕಿತ್ತು; ಟ್ರಂಪ್ ತಲೆಬಾಗಬೇಕಾಗಿತ್ತು. ಟ್ರಂಪ್ ಒಬ್ಬ ಹೇಡಿ, ಅಂಜುಬುರುಕ ವ್ಯಕ್ತಿ. ಅವರನ್ನು ಧಿಕ್ಕರಿಸಿದ ಎಲ್ಲ ದೇಶಗಳಿಗೆ ಅವರು ತಲೆಬಾಗಬೇಕಾಗಿತ್ತು. ನಾಲ್ಕು ಅಮೇರಿಕನ್ ಕಂಪನಿಗಳನ್ನು ಮುಚ್ಚಿ, ಅವು ತೊಂದರೆಗೆ ಸಿಲುಕುತ್ತವೆ” ಎಂದು ಅವರು ಪ್ರತಿಪಾದಿಸಿದರು.

ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲಿನ ಶೇ. 11 ರಷ್ಟು ಸುಂಕವನ್ನು ತೆಗೆದುಹಾಕುವ ಭಾರತದ ನೀತಿ ನಿರ್ಧಾರದಿಂದಾಗಿ, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತೀಯ ರೈತರು ಮಾರುಕಟ್ಟೆಗೆ ತಂದಾಗ ಅವರ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು.

“ಅಮೆರಿಕದಿಂದ ಹತ್ತಿ (ಭಾರತಕ್ಕೆ) ಬಂದಾಗ, ಇಲ್ಲಿನ ರೈತರು ಮಾರುಕಟ್ಟೆಯಲ್ಲಿ ರೂ. 900 ಕ್ಕಿಂತ ಕಡಿಮೆ ಪಡೆಯುತ್ತಾರೆ. ರೈತರ ವಿಷಯದಲ್ಲಿ ಹೀಗಾಗುತ್ತಿದೆ, ಅವರ (ಯುಎಸ್) ರೈತರು ಶ್ರೀಮಂತರಾಗುತ್ತಿದ್ದಾರೆ. ಗುಜರಾತ್‌ನ ರೈತರನ್ನು ಬಡವರಾಗಲಾಗುತ್ತಿದೆ” ಎಂದು ಅವರು ಮತ್ತಷ್ಟು ಪ್ರತಿಪಾದಿಸಿದರು.

ಕೇಂದ್ರ ಸರ್ಕಾರವು ಮೊದಲು ಆಗಸ್ಟ್ 19 ರಿಂದ ಸೆಪ್ಟೆಂಬರ್ 30 ರವರೆಗೆ 40 ದಿನಗಳವರೆಗೆ ಈ ಸುಂಕವನ್ನು ತೆಗೆದುಹಾಕಿತು. ಆದರೆ, ಈಗ ಅದನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ತೆಗೆದುಹಾಕಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

“ಈಗ, ನಮ್ಮ ದೇಶದ ರೈತರು ತಮ್ಮ ಹತ್ತಿಯನ್ನು ಮಾರಾಟ ಮಾಡಲು ಯಾವುದೇ ಮಾರ್ಗವಿಲ್ಲ. ನಮ್ಮ ದೇಶದ ರೈತರು ಸಾಲ ಪಡೆದು ಬೀಜಗಳು ಮತ್ತು ರಸಗೊಬ್ಬರಗಳನ್ನು ಖರೀದಿಸಿದ್ದಾರೆ, ಕೃಷಿ ಕಾರ್ಮಿಕರಿಗೆ ಹಣವನ್ನು ಪಾವತಿಸಿದ್ದಾರೆ, ಈಗ ಅವರು ಸಾಲವನ್ನು ಹೇಗೆ ಮರುಪಾವತಿಸುತ್ತಾರೆ? ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಬಿಟ್ಟು ಬೇರೆ ದಾರಿ ಇರುವುದಿಲ್ಲ” ಎಂದು ಎಎಪಿ ಸಂಚಾಲಕ ಹೇಳಿದ್ದಾರೆ.

“ಟ್ರಂಪ್ ಅವರ ಒತ್ತಡದಲ್ಲಿ, ನಮ್ಮ ಕೇಂದ್ರ ಸರ್ಕಾರವು ಶೇಕಡಾ 11 ರಷ್ಟು ಸುಂಕವನ್ನು ತೆಗೆದುಹಾಕುವ ಮೂಲಕ ದೇಶದ ರೈತರನ್ನು ಆತ್ಮಹತ್ಯೆಗೆ ಒತ್ತಾಯಿಸಿತು” ಎಂದು ಅವರು ಆರೋಪಿಸಿದರು.

ಟ್ರಂಪ್ ಸುಂಕಗಳನ್ನು ವಿಧಿಸಿದ ಇತರ ದೇಶಗಳು ಬಲವಾಗಿ ಪ್ರತಿಕ್ರಿಯಿಸಿದವು, ಅಮೆರಿಕ ಅಧ್ಯಕ್ಷರು ಸುಂಕವನ್ನು ತೆಗೆದುಹಾಕಬೇಕಾಯಿತು. ಆದರೆ, ಭಾರತ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಉತ್ತರ ಪ್ರದೇಶ| ಅಮೇಥಿಯಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ; ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...