Homeಮುಖಪುಟಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ ಆಗ್ರಹ

ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕತೆ ಕುಸಿಯುತ್ತಿರುವುದರಿಂದ ಬಡವರು, ಮಧ್ಯಮವರ್ಗದವರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಅವರ ಹಿತ ಕಾಯಲು ಸರ್ಕಾರ ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ” ಎಂದಿದ್ದಾರೆ.

ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ


ರಿಸರ್ವ್‌ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.

ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು. ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಮಾನವ ನಿರ್ಮಿತ ವೈರಸ್ ಎಂದು ಜಪಾನ್‌ನ ನೊಬೆಲ್ ಪ್ರಶಸ್ತಿ ವಿಜೇತ ಹೇಳಿದ್ದಾರೆಯೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...