Homeಮುಖಪುಟಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

- Advertisement -
- Advertisement -

ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ಸಂಸದೀಯ ಸಮಿತಿಯ ಶಿಫಾರಸನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿಗೆ ಮಂಗಳವಾರ ಪತ್ರ ಬರೆದು ಅವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ಈ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಪಿಣರಾಯಿ ಧ್ವನಿಗೂಡಿಸಿದ್ದಾರೆ.

ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಹಿಂದಿ ಮತ್ತು ಭಾರತದ ಇತರ ಭಾಗಗಳಲ್ಲಿ ಆಯಾ ಸ್ಥಳೀಯ ಭಾಷೆಯಾಗಿರಬೇಕು ಎಂದು ಸಂಸದೀಯ ಸಮಿತಿಯು ಇತ್ತೀಚೆಗೆ ಶಿಫಾರಸು ಮಾಡಿತ್ತು. ಸಮಿತಿಯು ಇಂಗ್ಲಿಷ್ ಬಳಕೆಯನ್ನು ಐಚ್ಛಿಕವಾಗಿ ಮಾಡಬೇಕು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದಲ್ಲಿ ಹಲವು ಭಾಷೆಗಳಿವೆ, ಒಂದೇ ಭಾಷೆಯನ್ನು ದೇಶದ ಭಾಷೆ ಎಂದು ಕರೆಯಲಾಗದ ಕಾರಣ ಉನ್ನತ ಶಿಕ್ಷಣ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯಾಗಿ ಹೇರಲು ಸಾಧ್ಯವಿಲ್ಲ” ಪಿಣರಾಯಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ದೇಶದ ಯುವಕರು ಸರ್ಕಾರಿ ವಲಯದಲ್ಲಿ ಸೀಮಿತ ಉದ್ಯೋಗಾವಕಾಶಗಳನ್ನು ಹೊಂದಿದ್ದಾರೆ ಎಂಬುದರ ಬಗ್ಗೆ ಗಮನಸೆಳೆದ ಕೇರಳ ಸಿಎಂ, ಅವರಲ್ಲಿ ಗಣನೀಯ ವರ್ಗವನ್ನು ತುಲನಾತ್ಮಕವಾಗಿ ಅನಾನುಕೂಲಕ್ಕೆ ಒಳಪಡಿಸುವ ಯಾವುದೇ ಪ್ರಯತ್ನವು ಸಮಾಜದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

“ನಮ್ಮ ದೇಶದ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳು ಈ ವಿಷಯದಲ್ಲಿ ತಮ್ಮ ಗಂಭೀರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಭಾರತ ಸರ್ಕಾರದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ನೀಡಬಹುದು ಎಂದು ನಾನು ಸೂಚಿಸಲು ಈ ಅವಕಾಶವನ್ನು ಬಳಸುತ್ತೇನೆ” ಎಂದು ಪಿಣರಾಯಿ ವಿಜಯನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಯುವ ಪೀಳಿಗೆಯು ತಮ್ಮ ಮಾತೃಭಾಷೆಯ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯಲು ಪ್ರೋತ್ಸಾಹಿಸಬೇಕಾದರೂ, “ಭಾಷೆಯ ಹೇರಿಕೆ” ಎಂದು ದೂರದಿಂದಲೂ ಗ್ರಹಿಸಬಹುದಾದ ಯಾವುದೇ ಪ್ರಯತ್ನವು ಸಾಮಾನ್ಯ ಜನರಲ್ಲಿ ಮತ್ತು ನಿರ್ದಿಷ್ಟವಾಗಿ ಉದ್ಯೋಗಾಕಾಂಕ್ಷಿಗಳಲ್ಲಿ ಆತಂಕವನ್ನು ಉಂಟುಮಾಡುತ್ತದೆ ಎಂದು ಪಿಣರಾಯಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ದಿವಸ ಆಚರಣೆ ವಿರೋಧಿಸಿ ಮುಖ್ಯಮಂತ್ರಿಗೆ ಕುಮಾರಸ್ವಾಮಿ ಪತ್ರ

“ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಗೌರವಾನ್ವಿತ ಪ್ರಧಾನ ಮಂತ್ರಿಗಳು ಆದಷ್ಟು ಬೇಗ ಮಧ್ಯಪ್ರವೇಶಿಸಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಪಿಣರಾಯಿ ಹೇಳಿದ್ದಾರೆ.

ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಸಾಂಸ್ಕೃತಿಕ, ಭಾಷಾ ಮತ್ತು ಧಾರ್ಮಿಕ ವೈವಿಧ್ಯಗಳ ನಡುವೆ ಸಹೋದರತ್ವದ ಭಾವನೆಯೊಂದಿಗೆ ನಾವು ಒಂದೇ ರಾಷ್ಟ್ರವಾಗಿದ್ದೇವೆ ಎಂದು ಅವರು ಹೇಳಿದ್ದಾರೆ. “ನಮ್ಮ ಉನ್ನತ ಕಲಿಕಾ ಕೇಂದ್ರಗಳಲ್ಲಿ ಹಿಂದಿಯನ್ನು ಮುಖ್ಯ ಬೋಧನಾ ಭಾಷೆಯನ್ನಾಗಿ ಹೇರಲು ಸಾಧ್ಯವಿಲ್ಲ. ಶೈಕ್ಷಣಿಕ ವಲಯದಲ್ಲಿ ರಾಜ್ಯ ನಿರ್ದಿಷ್ಟ ಅಂಶಗಳನ್ನು ಗುರುತಿಸಬೇಕು. ಈ ವಿಷಯದಲ್ಲಿ ಆತುರದ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂವಿಧಾನದ ನಿರ್ದಿಷ್ಟಪಡಿಸಿದ ಎಲ್ಲಾ ರಾಷ್ಟ್ರೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಬೇಕು ಎಂದು ಅವರು ಹೇಳಿದ್ದು,“ಯಾವುದೇ ಭಾಷೆಯನ್ನು ಇತರ ಭಾಷೆಗಳಿಗಿಂತ ಬೋಧನಾ ಮಾಧ್ಯಮವಾಗಿ ಆದ್ಯತೆ ನೀಡಬಾರದು ಎಂದು ನಾನು ವಿನಂತಿಸುತ್ತೇನೆ. ಇದು ನಮ್ಮ ಸಹಕಾರಿ ಫೆಡರಲ್ ವ್ಯವಸ್ಥೆಗೆ ಒಳ್ಳೆಯದಲ್ಲ” ಎಂದು ಪಿಣರಾಯಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರೇ ‘ಹಿಂದಿ ರಾಷ್ಟ್ರಭಾಷೆ’ ಎಂಬ ಭ್ರಮೆಯಿಂದ ಹೊರಬನ್ನಿ: ಸಿದ್ದರಾಮಯ್ಯ

ತಮಿಳುನಾಡು ಸಿಎಂ ಸ್ಟಾಲಿನ್ ಕೂಡಾ ಕೇಂದ್ರ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಹಿಂದಿಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವು ನಮ್ಮ ಮೇಲೆ ಮತ್ತೊಂದು ಭಾಷಾಯುದ್ಧ ಮಾಡುವಂತೆ ಪ್ರೇರೇಪಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಹಿಂದಿಯನ್ನು ಹೇರುವ ಯಾವುದೇ ಕ್ರಮವು ಹಿಂದಿ ಮಾತನಾಡದ ನಾಗರಿಕರು ಮತ್ತು ಪ್ರದೇಶಗಳನ್ನು ಎರಡನೆ ದರ್ಜೆಯ ಸ್ಥಾನಮಾನಕ್ಕೆ ತಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಹಿಂದಿ ಮಾತನಾಡದ ನಾಗರಿಕರ ಜನಸಂಖ್ಯೆ ದೇಶದಲ್ಲಿ ಹೆಚ್ಚಿದೆ ಎಂದು ಹೇಳಿರುವ ಸ್ಟಾಲಿನ್‌, ಬೋಧನಾ ಮಾಧ್ಯಮವಾಗಿ ಇಂಗ್ಲಿಷ್ ಅನ್ನು ತೆಗೆದುಹಾಕುವ ಪ್ರಸ್ತಾಪವನ್ನು ವಿರೋಧಿಸಿದ್ದಾರೆ. ಕೇರಳದ ಆಡಳಿತಾರೂಢ ಸಿಪಿಐ(ಎಂ) ಕೂಡಾ ಸಂಸದೀಯ ಸಮಿತಿಯ ಶಿಫಾರಸನ್ನು ವಿರೋಧಿಸಿದ್ದು, ಇದು ಸಂವಿಧಾನದ ಆಶಯ ಮತ್ತು ದೇಶದ ಭಾಷಾ ವೈವಿಧ್ಯತೆಗೆ ವಿರುದ್ಧವಾಗಿದೆ ಎಂದು ಹೇಳಿದೆ.

ಕಳೆದ ತಿಂಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ತನ್ನ 11 ನೇ ವರದಿಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿಯು ಎಲ್ಲಾ ರಾಜ್ಯಗಳಲ್ಲಿ ಇಂಗ್ಲಿಷ್‌ಗಿಂತ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸು ಮಾಡಿದೆ. ಸಮಿತಿಯು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯ ಪ್ರಕಾರ ಶಿಫಾರಸುಗಳನ್ನು ರೂಪಿಸಿದ್ದು, ಬೋಧನಾ ಮಾಧ್ಯಮವು ಅಧಿಕೃತ ಅಥವಾ ಪ್ರಾದೇಶಿಕ ಭಾಷೆಯಾಗಿರಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

ಹಿಂದಿ ಮಾತನಾಡುವ ರಾಜ್ಯಗಳಲ್ಲಿನ ಐಐಟಿಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರೀಯ ವಿದ್ಯಾಲಯಗಳಲ್ಲಿ ಬೋಧನಾ ಮಾಧ್ಯಮವು ಹಿಂದಿ ಭಾಷೆಯಾಗಿರಬೇಕು ಮತ್ತು ಭಾರತದ ಇತರ ಭಾಗಗಳಲ್ಲಿ ಆಯಾ ಸ್ಥಳೀಯ ಭಾಷೆಯಾಗಿರಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ.

ಹಿಂದಿ ಬಳಕೆಯ ಆಧಾರದ ಮೇಲೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಮೂರು ಗುಂಪುಗಳಾಗಿ (ಪ್ರದೇಶಗಳು) ವಿಂಗಡಿಸಲಾಗಿದೆ.

ಹಿಂದಿ ಭಾಷಿಕ ರಾಜ್ಯಗಳಲ್ಲಿ ಉದ್ದೇಶಪೂರ್ವಕವಾಗಿ ಹಿಂದಿಯಲ್ಲಿ ಕೆಲಸ ಮಾಡದ ಕೇಂದ್ರ ಸರ್ಕಾರದ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಎಚ್ಚರಿಕೆ ನೀಡಬೇಕು ಮತ್ತು ಎಚ್ಚರಿಕೆಯ ಹೊರತಾಗಿಯೂ ಅವರು ಕಾರ್ಯನಿರ್ವಹಿಸದಿದ್ದರೆ, ಅದನ್ನು ಅವರ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿಯಲ್ಲಿ (ಎಪಿಎಆರ್) ಉಲ್ಲೇಖಿಸಬೇಕು ಎಂದು ಸಮಿತಿ ಹೇಳಿದೆ.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಕೇಂದ್ರ ಸರ್ಕಾರದ ಕಚೇರಿಗಳು, ಸಚಿವಾಲಯಗಳು ಅಥವಾ ಇಲಾಖೆಗಳ ಪತ್ರಗಳು, ಫ್ಯಾಕ್ಸ್‌ಗಳು ಮತ್ತು ಇಮೇಲ್‌ಗಳಂತಹ ಸಂವಹನವು ಹಿಂದಿ ಅಥವಾ ಸ್ಥಳೀಯ ಭಾಷೆಗಳಲ್ಲಿ ನಡೆಯಬೇಕು. ಕೇಂದ್ರ ಸರ್ಕಾರ ಆಯೋಜಿಸುವ ಯಾವುದೇ ಕಾರ್ಯಕ್ರಮಗಳು ಹಿಂದಿ ಅಥವಾ ಸ್ಥಳೀಯ ಭಾಷೆಯಲ್ಲಿರಬೇಕು ಎಂದು ಅದು ಶಿಫಾರಸ್ಸು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕ ಸರ್ಕಾರ ಏನು ಗೆಣಸು ತಿನ್ನುತ್ತಾ ಇದೆಯೇ,ಇವರಾರಿಗೂ ಕನ್ನಡದ ಬಗ್ಗೆ ಅಭಿಮಾನವಿಲ್ಲವೇ? ನಾಡು ನುಡಿ ಸಂಸ್ಕೃತಿ ಉಳಿಸಿಕೊಳ್ಳೋ ಯೋಗ್ಯತೆ ಮತ್ತು ದಮ್ಮು ಇಲ್ಲದಿದ್ದರೆ ನಿಮಗೇಕೆ ಅಧಿಕಾರ? ಅಧಿಕಾರ ಬಿಟ್ಟು ತೊಲಗಿ,ಇಲ್ಲವೇ ಜನರೆ ಮನೆಗೆ ಕಳಿಸುತ್ತಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...