Homeಮುಖಪುಟಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿ ಅಥವಾ ಸ್ಥಳೀಯ ಭಾಷೆಗಳನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ಯೋಜನೆಯನ್ನು ದಕ್ಷಿಣ ಭಾರತದ ಮೂರು ರಾಜ್ಯಗಳು ವಿರೋಧಿಸಿದ್ದು, ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಆದರೆ ಈ ಪ್ರತಿಭಟನೆಗಳ ಬಗ್ಗೆ ಮೌನ ವಹಿಸಿರುವ ಒಕ್ಕೂಟ ಸರಕಾರ ಶಿಫಾರಸ್ಸುಗಳನ್ನು ಮುಂದುವರಿಸಲು ಮುಂದಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯೋಜನೆಗಳನ್ನು ಕೈಬಿಡುವಂತೆ ಕೇಳಿದರೆ, ತಮಿಳುನಾಡು ಸಿಎಂ ಒಕ್ಕೂಟ ಸರ್ಕಾರಕ್ಕೆ ಹಿಂದಿ ವಿರೋಧಿ ಆಂದೋಲನಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಕೂಡ ಈ ಯೋಜನೆಯನ್ನು ವಿರೋಧಿಸಿದ್ದು, ಇದು ಒಕ್ಕೂಟದ ಮನೋಭಾವದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸತ್ತಿನ ಅಧಿಕೃತ ಭಾಷೆಗಳ ಸಮಿತಿಯು ವರದಿಯ 11 ನೇ ಸಂಪುಟದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಕಡ್ಡಾಯವಾಗಿ ಹಿಂದಿ ಮತ್ತು ಸ್ಥಳೀಯ ಭಾಷೆಯಾಗಿರಬೇಕು ಎಂದು ಶಿಫಾರಸು ಮಾಡಿದೆ.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಇದಲ್ಲದೆ, ನೇಮಕಾತಿ ಪರೀಕ್ಷೆಗಳಲ್ಲಿ ಕಡ್ಡಾಯ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಹಾಕುವಂತೆ ಸಮಿತಿಯು ಶಿಫಾರಸು ಮಾಡಿದೆ. ಇಂಗ್ಲೀಷನ್ನು ಸಂಪೂರ್ಣವಾಗಿ ಬೋಧನಾ ಮಾಧ್ಯಮವಾಗಿ ಮಾತ್ರ ಬಳಸಬೇಕು ಮತ್ತು ಕ್ರಮೇಣ ಅದನ್ನು ಹಿಂದಿಯಿಂದ ಬದಲಾಯಿಸಬೇಕು ಎಂದು ಅದು ಹೇಳಿದ್ದು, ವರದಿಯನ್ನು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ.

ಒಕ್ಕೂಟ ಸರ್ಕಾರ ಮತ್ತು ಸಮಿತಿಯ ಸದಸ್ಯರು ಶಿಫಾರಸುಗಳ ವಿರುದ್ಧ ಬಂದ ಟೀಕೆಗಳು ಮತ್ತು ವಿರೋಧಗಳಿಗೆ ಪ್ರತಿಕ್ರಿಯಿಸದಿದ್ದರೂ, ಅಮಿತ್ ಶಾ ಅವರು ಅಕ್ಟೋಬರ್ 16 ರಂದು ಹಿಂದಿಯಲ್ಲಿ ವೈದ್ಯಕೀಯ ಪುಸ್ತಕಗಳನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ.

ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ ಪುಸ್ತಕಗಳನ್ನು ಅಮಿತ್‌ ಶಾ ಮಧ್ಯಪ್ರದೇಶದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇಂಜಿನಿಯರಿಂಗ್ ಕೋರ್ಸ್‌ಗಳು ಸೇರಿದಂತೆ ಹೆಚ್ಚಿನ ಪಠ್ಯಪುಸ್ತಕಗಳನ್ನು ಹಿಂದಿಗೆ ಭಾಷಾಂತರಿಸಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಂಸದ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಒಂದು ವೇಳೆ ಶಿಫಾರಸುಗಳನ್ನು ಜಾರಿಗೆ ತಂದರೆ, 1965 ರಲ್ಲಿ ರಾಜ್ಯ ಕಂಡಂತಹ ಬೃಹತ್ ಪ್ರತಿಭಟನೆಗಳು ನಡೆಯಬಹುದು ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಹೇಳಿದ್ದಾರೆ. “ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಆದ್ಯತೆಯು ಅಸಾಂವಿಧಾನಿಕವಾಗಿದ್ದು, ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ” ಎಂದು ಸ್ಟಾಲಿನ್‌ ಹೇಳಿದ್ದಾರೆ.

ಹಿಂದಿಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವು ನಮ್ಮ ಮೇಲೆ ಮತ್ತೊಂದು ಭಾಷಾಯುದ್ಧ ಮಾಡುವಂತೆ ಪ್ರೇರೇಪಿಸುತ್ತದೆ ಎಂದು ಸ್ಟಾಲಿನ್‌ ಎಚ್ಚರಿಸಿದ್ದಾರೆ. ಹಿಂದಿಯನ್ನು ಹೇರುವ ಯಾವುದೇ ಕ್ರಮವು ಹಿಂದಿ ಮಾತನಾಡದ ನಾಗರಿಕರು ಮತ್ತು ಪ್ರದೇಶಗಳನ್ನು ಎರಡನೆ ದರ್ಜೆಯ ಸ್ಥಾನಮಾನಕ್ಕೆ ತಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದೇ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು, ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...