Homeಮುಖಪುಟಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿ ಅಥವಾ ಸ್ಥಳೀಯ ಭಾಷೆಗಳನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ಯೋಜನೆಯನ್ನು ದಕ್ಷಿಣ ಭಾರತದ ಮೂರು ರಾಜ್ಯಗಳು ವಿರೋಧಿಸಿದ್ದು, ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಆದರೆ ಈ ಪ್ರತಿಭಟನೆಗಳ ಬಗ್ಗೆ ಮೌನ ವಹಿಸಿರುವ ಒಕ್ಕೂಟ ಸರಕಾರ ಶಿಫಾರಸ್ಸುಗಳನ್ನು ಮುಂದುವರಿಸಲು ಮುಂದಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯೋಜನೆಗಳನ್ನು ಕೈಬಿಡುವಂತೆ ಕೇಳಿದರೆ, ತಮಿಳುನಾಡು ಸಿಎಂ ಒಕ್ಕೂಟ ಸರ್ಕಾರಕ್ಕೆ ಹಿಂದಿ ವಿರೋಧಿ ಆಂದೋಲನಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಕೂಡ ಈ ಯೋಜನೆಯನ್ನು ವಿರೋಧಿಸಿದ್ದು, ಇದು ಒಕ್ಕೂಟದ ಮನೋಭಾವದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸತ್ತಿನ ಅಧಿಕೃತ ಭಾಷೆಗಳ ಸಮಿತಿಯು ವರದಿಯ 11 ನೇ ಸಂಪುಟದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಕಡ್ಡಾಯವಾಗಿ ಹಿಂದಿ ಮತ್ತು ಸ್ಥಳೀಯ ಭಾಷೆಯಾಗಿರಬೇಕು ಎಂದು ಶಿಫಾರಸು ಮಾಡಿದೆ.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಇದಲ್ಲದೆ, ನೇಮಕಾತಿ ಪರೀಕ್ಷೆಗಳಲ್ಲಿ ಕಡ್ಡಾಯ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಹಾಕುವಂತೆ ಸಮಿತಿಯು ಶಿಫಾರಸು ಮಾಡಿದೆ. ಇಂಗ್ಲೀಷನ್ನು ಸಂಪೂರ್ಣವಾಗಿ ಬೋಧನಾ ಮಾಧ್ಯಮವಾಗಿ ಮಾತ್ರ ಬಳಸಬೇಕು ಮತ್ತು ಕ್ರಮೇಣ ಅದನ್ನು ಹಿಂದಿಯಿಂದ ಬದಲಾಯಿಸಬೇಕು ಎಂದು ಅದು ಹೇಳಿದ್ದು, ವರದಿಯನ್ನು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ.

ಒಕ್ಕೂಟ ಸರ್ಕಾರ ಮತ್ತು ಸಮಿತಿಯ ಸದಸ್ಯರು ಶಿಫಾರಸುಗಳ ವಿರುದ್ಧ ಬಂದ ಟೀಕೆಗಳು ಮತ್ತು ವಿರೋಧಗಳಿಗೆ ಪ್ರತಿಕ್ರಿಯಿಸದಿದ್ದರೂ, ಅಮಿತ್ ಶಾ ಅವರು ಅಕ್ಟೋಬರ್ 16 ರಂದು ಹಿಂದಿಯಲ್ಲಿ ವೈದ್ಯಕೀಯ ಪುಸ್ತಕಗಳನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ.

ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ ಪುಸ್ತಕಗಳನ್ನು ಅಮಿತ್‌ ಶಾ ಮಧ್ಯಪ್ರದೇಶದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇಂಜಿನಿಯರಿಂಗ್ ಕೋರ್ಸ್‌ಗಳು ಸೇರಿದಂತೆ ಹೆಚ್ಚಿನ ಪಠ್ಯಪುಸ್ತಕಗಳನ್ನು ಹಿಂದಿಗೆ ಭಾಷಾಂತರಿಸಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಂಸದ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಒಂದು ವೇಳೆ ಶಿಫಾರಸುಗಳನ್ನು ಜಾರಿಗೆ ತಂದರೆ, 1965 ರಲ್ಲಿ ರಾಜ್ಯ ಕಂಡಂತಹ ಬೃಹತ್ ಪ್ರತಿಭಟನೆಗಳು ನಡೆಯಬಹುದು ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಹೇಳಿದ್ದಾರೆ. “ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಆದ್ಯತೆಯು ಅಸಾಂವಿಧಾನಿಕವಾಗಿದ್ದು, ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ” ಎಂದು ಸ್ಟಾಲಿನ್‌ ಹೇಳಿದ್ದಾರೆ.

ಹಿಂದಿಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವು ನಮ್ಮ ಮೇಲೆ ಮತ್ತೊಂದು ಭಾಷಾಯುದ್ಧ ಮಾಡುವಂತೆ ಪ್ರೇರೇಪಿಸುತ್ತದೆ ಎಂದು ಸ್ಟಾಲಿನ್‌ ಎಚ್ಚರಿಸಿದ್ದಾರೆ. ಹಿಂದಿಯನ್ನು ಹೇರುವ ಯಾವುದೇ ಕ್ರಮವು ಹಿಂದಿ ಮಾತನಾಡದ ನಾಗರಿಕರು ಮತ್ತು ಪ್ರದೇಶಗಳನ್ನು ಎರಡನೆ ದರ್ಜೆಯ ಸ್ಥಾನಮಾನಕ್ಕೆ ತಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದೇ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು, ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...