Homeಮುಖಪುಟಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ಹಿಂದಿಯನ್ನು ಕಡ್ಡಾಯಗೊಳಿಸಿದರೆ ಮತ್ತೊಂದು ಭಾಷಾಯುದ್ಧ ನಡೆಯುತ್ತದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಎಚ್ಚರಿಸಿದ್ದರು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಇಂಗ್ಲಿಷ್ ಬದಲಿಗೆ ಹಿಂದಿ ಅಥವಾ ಸ್ಥಳೀಯ ಭಾಷೆಗಳನ್ನು ಬೋಧನಾ ಮಾಧ್ಯಮವನ್ನಾಗಿ ಮಾಡುವ ಯೋಜನೆಯನ್ನು ದಕ್ಷಿಣ ಭಾರತದ ಮೂರು ರಾಜ್ಯಗಳು ವಿರೋಧಿಸಿದ್ದು, ತನ್ನ ಪ್ರತಿಭಟನೆಯನ್ನು ದಾಖಲಿಸಿದೆ. ಆದರೆ ಈ ಪ್ರತಿಭಟನೆಗಳ ಬಗ್ಗೆ ಮೌನ ವಹಿಸಿರುವ ಒಕ್ಕೂಟ ಸರಕಾರ ಶಿಫಾರಸ್ಸುಗಳನ್ನು ಮುಂದುವರಿಸಲು ಮುಂದಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯೋಜನೆಗಳನ್ನು ಕೈಬಿಡುವಂತೆ ಕೇಳಿದರೆ, ತಮಿಳುನಾಡು ಸಿಎಂ ಒಕ್ಕೂಟ ಸರ್ಕಾರಕ್ಕೆ ಹಿಂದಿ ವಿರೋಧಿ ಆಂದೋಲನಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಕೂಡ ಈ ಯೋಜನೆಯನ್ನು ವಿರೋಧಿಸಿದ್ದು, ಇದು ಒಕ್ಕೂಟದ ಮನೋಭಾವದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸತ್ತಿನ ಅಧಿಕೃತ ಭಾಷೆಗಳ ಸಮಿತಿಯು ವರದಿಯ 11 ನೇ ಸಂಪುಟದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮವು ಕಡ್ಡಾಯವಾಗಿ ಹಿಂದಿ ಮತ್ತು ಸ್ಥಳೀಯ ಭಾಷೆಯಾಗಿರಬೇಕು ಎಂದು ಶಿಫಾರಸು ಮಾಡಿದೆ.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಇದಲ್ಲದೆ, ನೇಮಕಾತಿ ಪರೀಕ್ಷೆಗಳಲ್ಲಿ ಕಡ್ಡಾಯ ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಹಾಕುವಂತೆ ಸಮಿತಿಯು ಶಿಫಾರಸು ಮಾಡಿದೆ. ಇಂಗ್ಲೀಷನ್ನು ಸಂಪೂರ್ಣವಾಗಿ ಬೋಧನಾ ಮಾಧ್ಯಮವಾಗಿ ಮಾತ್ರ ಬಳಸಬೇಕು ಮತ್ತು ಕ್ರಮೇಣ ಅದನ್ನು ಹಿಂದಿಯಿಂದ ಬದಲಾಯಿಸಬೇಕು ಎಂದು ಅದು ಹೇಳಿದ್ದು, ವರದಿಯನ್ನು ಈಗಾಗಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದೆ.

ಒಕ್ಕೂಟ ಸರ್ಕಾರ ಮತ್ತು ಸಮಿತಿಯ ಸದಸ್ಯರು ಶಿಫಾರಸುಗಳ ವಿರುದ್ಧ ಬಂದ ಟೀಕೆಗಳು ಮತ್ತು ವಿರೋಧಗಳಿಗೆ ಪ್ರತಿಕ್ರಿಯಿಸದಿದ್ದರೂ, ಅಮಿತ್ ಶಾ ಅವರು ಅಕ್ಟೋಬರ್ 16 ರಂದು ಹಿಂದಿಯಲ್ಲಿ ವೈದ್ಯಕೀಯ ಪುಸ್ತಕಗಳನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ.

ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವರಸಾಯನಶಾಸ್ತ್ರ ಪುಸ್ತಕಗಳನ್ನು ಅಮಿತ್‌ ಶಾ ಮಧ್ಯಪ್ರದೇಶದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇಂಜಿನಿಯರಿಂಗ್ ಕೋರ್ಸ್‌ಗಳು ಸೇರಿದಂತೆ ಹೆಚ್ಚಿನ ಪಠ್ಯಪುಸ್ತಕಗಳನ್ನು ಹಿಂದಿಗೆ ಭಾಷಾಂತರಿಸಲು ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಂಸದ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯೊಂದನ್ನೆ ರಾಷ್ಟ್ರಭಾಷೆ ಮಾಡಲು ಸಾಧ್ಯವಿಲ್ಲ: ಶಿಕ್ಷಣ ತಜ್ಞರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ

ಒಂದು ವೇಳೆ ಶಿಫಾರಸುಗಳನ್ನು ಜಾರಿಗೆ ತಂದರೆ, 1965 ರಲ್ಲಿ ರಾಜ್ಯ ಕಂಡಂತಹ ಬೃಹತ್ ಪ್ರತಿಭಟನೆಗಳು ನಡೆಯಬಹುದು ಎಂದು ತಮಿಳುನಾಡು ಸಿಎಂ ಸ್ಟಾಲಿನ್‌ ಹೇಳಿದ್ದಾರೆ. “ಇತರ ಭಾಷೆಗಳಿಗಿಂತ ಹಿಂದಿಗೆ ನೀಡಲಾದ ಆದ್ಯತೆಯು ಅಸಾಂವಿಧಾನಿಕವಾಗಿದ್ದು, ಅಂತಹ ಕ್ರಮವು ರಾಷ್ಟ್ರದ ಸಮಗ್ರತೆಗೆ ಬೆದರಿಕೆಯಾಗಿದೆ” ಎಂದು ಸ್ಟಾಲಿನ್‌ ಹೇಳಿದ್ದಾರೆ.

ಹಿಂದಿಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವು ನಮ್ಮ ಮೇಲೆ ಮತ್ತೊಂದು ಭಾಷಾಯುದ್ಧ ಮಾಡುವಂತೆ ಪ್ರೇರೇಪಿಸುತ್ತದೆ ಎಂದು ಸ್ಟಾಲಿನ್‌ ಎಚ್ಚರಿಸಿದ್ದಾರೆ. ಹಿಂದಿಯನ್ನು ಹೇರುವ ಯಾವುದೇ ಕ್ರಮವು ಹಿಂದಿ ಮಾತನಾಡದ ನಾಗರಿಕರು ಮತ್ತು ಪ್ರದೇಶಗಳನ್ನು ಎರಡನೆ ದರ್ಜೆಯ ಸ್ಥಾನಮಾನಕ್ಕೆ ತಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದೇ ವೇಳೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು, ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...