Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...