Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...