Homeಮುಖಪುಟಜಾತ್ಯತೀತ ಸಂವಿಧಾನದಡಿ 'ಹಿಂದೂ ರಾಷ್ಟ್ರ' ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

- Advertisement -
- Advertisement -

ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳಿಂದಲೇ ಸಂವಿಧಾನಕ್ಕೆ ಅಪಾಯ ಎದುರಾಗಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಶುಕ್ರವಾರ (ಫೆ.21) ಹೇಳಿದ್ದಾರೆ.

ನ್ಯಾಯಮೂರ್ತಿ ಸುನಂದಾ ಭಂಡಾರೆ ಪ್ರತಿಷ್ಠಾನ ನವದೆಹಲಿಯಲ್ಲಿ ಹಮ್ಮಿಕೊಂಡಿದ್ದ ಸುನಂದಾ ಭಂಡಾರೆ ಸ್ಮಾರಕ 29ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

“ಭಾರತದ ಸಂವಿಧಾನವನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ವ್ಯಕ್ತಿಗಳು ಅದನ್ನು ತಿರಸ್ಕರಿಸುವುದನ್ನು ನಾವು ನೋಡುತ್ತಿದ್ದೇವೆ. ಇದನ್ನು ಔಪಚಾರಿಕ ಮತ್ತು ಅನೌಪಚಾರಿಕವಾಗಿ ಹಲವು ವಿಧಗಳಲ್ಲಿ ಮಾಡಲಾಗುತ್ತಿದೆ. ಔಪಚಾರಿಕ ವಿಧಕ್ಕೆ ಪೌರತ್ವ ಕಾಯ್ದೆಯ ತಿದ್ದುಪಡಿ ಒಂದು ಉದಾಹರಣೆ. ಈ ಕಾಯ್ದೆ ಕೆಲವು ಧಾರ್ಮಿಕ ಸಮುದಾಯಗಳಿಗೆ ಮಾತ್ರ ತ್ವರಿತ ಪೌರತ್ವವನ್ನು ನೀಡುತ್ತದೆ” ಎಂದು ಇಂದಿರಾ ಜೈಸಿಂಗ್ ಹೇಳಿದ್ದಾರೆ.

“ಜಾತ್ಯತೀತ ಸಂವಿಧಾನದ ಅಡಿಯಲ್ಲಿ ಹಿಂದೂ ರಾಷ್ಟ್ರ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ. ಬಹುಸಂಖ್ಯಾತರ ಸಿದ್ಧಾಂತಕ್ಕೆ ಅನುಗುಣವಾಗಿ ಕಾಯ್ದೆಗಳನ್ನು ಮರು ವ್ಯಾಖ್ಯಾನಿಸುವುದು ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ವ್ಯವಸ್ಥೆಗೆ ಅಪಾಯಕಾರಿ. ಧರ್ಮ, ಶ್ರದ್ಧೆಗಳು ಕಾನೂನು ವ್ಯವಸ್ಥೆಯ ಆಧಾರವಾಗಲು ಸಾಧ್ಯವಿಲ್ಲ. ಭಾರತಕ್ಕೆ ಭದ್ರತೆ ಮತ್ತು ಸಮಗ್ರತೆಯನ್ನು ಕಲ್ಪಿಸುವ ಏಕೈಕ ಖಾತರಿ ಜಾತ್ಯತೀತತೆ ಆಗಿರುವುದರಿಂದ ಅದನ್ನು ಅಳವಡಿಸಿಕೊಳ್ಳಲಾಗಿದೆ ಎಂಬುದು ನನ್ನ ಅಭಿಪ್ರಾಯ” ಎಂದಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮವನ್ನು (ಬಿಎಸ್‌ಎ) ಟೀಕಿಸಿದ ಇಂದಿರಾ ಜೈಸಿಂಗ್, “ವೈವಾಹಿಕ ಅತ್ಯಾಚಾರದಂತಹ ವಿಷಯಗಳನ್ನು ‘ವಸಾಹತುಶಾಹಿಯಿಂದ ಮುಕ್ತಗೊಳಿಸುವಲ್ಲಿ’ ಹೊಸ ಕಾನೂನುಗಳು ವಿಫಲವಾಗಿವೆ” ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳನ್ನು ವಿಶೇಷವಾಗಿ ಗುರಿಯಾಗಿಟ್ಟುಕೊಂಡು ದೇಶದಾದ್ಯಂತ ಜಾರಿಗೆ ತರಲಾದ ಮತಾಂತರ ವಿರೋಧಿ ಕಾನೂನುಗಳ ಬಗ್ಗೆಯೂ ಹಿರಿಯ ವಕೀಲೆ ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತೀಯ ನ್ಯಾಯಾಲಯಗಳಲ್ಲಿ ಇತ್ತೀಚೆಗೆ ಕಾಣುತ್ತಿರುವ ನ್ಯಾಯಯುತತೆ ಮತ್ತು ನಿಷ್ಪಕ್ಷಪಾತದ ಕೊರತೆಯ ಬಗ್ಗೆ ಗಮನಸೆಳೆದ ಇಂದಿರಾ ಜೈಸಿಂಗ್, “ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಯಾದವ್ ಮಾಡಿದ ದ್ವೇಷ ಭಾಷಣ, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದಾಗ, “ನಿನ್ನ ಅಜ್ಜಿ ನಿನ್ನ ವಯಸ್ಸಿನಲ್ಲಿ ಹೇಗೆ ಹೆರಿಗೆ ಮಾಡಿಸುತ್ತಿದ್ದರು ಎಂದು ಕೇಳಿ ಬಾ” ಎಂಬುವುದಾಗಿ ಗುಜರಾತ್ ಹೈಕೋರ್ಟ್‌ ನ್ಯಾಯಾಧೀಶರೊಬ್ಬರು ಹೇಳಿರುವುದು ಇತ್ಯಾದಿ ಸೇರಿವೆ” ಎಂದಿದ್ದಾರೆ.

ಮುಂದುವರಿದು, “ನ್ಯಾಯಾಧೀಶರು ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳಲು ದೈವಿಕ ಮಾರ್ಗದರ್ಶನವನ್ನು ಹುಡುಕುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದು ಸಂವಿಧಾನ ವಿರೋಧಿಯಾಗಿದೆ. ನಾನು ಭಾರತದ ಸಂವಿಧಾನವನ್ನು ದೃಢೀಕರಿಸಲು ಇಲ್ಲಿ ನಿಂತಿದ್ದೇನೆ ಎಂದು ಹೇಳುವ ಮೂಲಕ ಮಾತು ಮುಗಿಸಲು ಬಯಸುತ್ತೇನೆ” ಎಂದು ಇಂದಿರಾ ಜೈಸಿಂಗ್ ಭಾಷಣ ಕೊನೆಗೊಳಿಸಿದ್ದಾರೆ.

‘ಭಾರತದ ಆಧುನಿಕ ಸಾಂವಿಧಾನಿಕತೆ’ ಎಂಬ ಉಪನ್ಯಾಸದ ವಿಷಯವನ್ನು ‘ಅತ್ಯಂತ ಮಹತ್ವದ್ದು’ ಎಂದು ಕರೆದ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ, “ಸಂವಿಧಾನವನ್ನು ಹೊಂದಿರುವುದು ಮತ್ತು ಸಾಂವಿಧಾನಿಕತೆಯನ್ನು ಆಚರಿಸುವುದರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವ ಅವಶ್ಯಕತೆಯಿದೆ” ಎಂದು ಹೇಳಿದ್ದಾರೆ.

ಕಾನೂನಿನ ಆಳ್ವಿಕೆಯ ಮಹತ್ವವನ್ನು ಒತ್ತಿ ಹೇಳಿದ ನ್ಯಾಯಮೂರ್ತಿ ಉಪಾಧ್ಯಾಯ, “ಸರ್ವಾಧಿಕಾರಿ ಆಡಳಿತಗಳು ಕೂಡ ಸಂವಿಧಾನವನ್ನು ಹೊಂದಿವೆ. ಆದರೆ, ಅವುಗಳಿಗೆ ಸಾಂವಿಧಾನಿಕತೆಯ ಕೊರತೆಯಿದೆ. ನನ್ನ ತಿಳುವಳಿಕೆಯಲ್ಲಿ, ಈ ಎರಡನ್ನೂ ಪ್ರತ್ಯೇಕಿಸುವುದು ಕಾನೂನಿನ ನಿಯಮ. ಸರ್ವಾಧಿಕಾರಿ ಆಡಳಿತಗಳು ಸಂವಿಧಾನವನ್ನು ಹೊಂದಿರಬಹುದು, ಆದರೆ, ಸಾಂವಿಧಾನಿಕತೆಯಿಲ್ಲ. ಜರ್ಮನಿಯಲ್ಲಿ ಮೊದಲ ಮಹಾಯುದ್ಧದ ನಂತರ ಹಿಟ್ಲರ್ ಮುನ್ನಲೆಗೆ ಬಂದಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆ” ಎಂದಿದ್ದಾರೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಭಕ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

‘ಎಲ್ಲಾ ಮುಸ್ಲಿಮರು ಭಯೋತ್ಪಾದಕರು’ ಎಂದ ಪ್ರಕರಣ : ಬಿಜೆಪಿ ನಾಯಕ ಪಿ.ಸಿ ಜಾರ್ಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...