Homeಮುಖಪುಟಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

ಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

- Advertisement -
- Advertisement -

ಹೊಸದಿಲ್ಲಿ: 2023ರ ಮಾರ್ಟಿನ್ ಎನ್ನಲ್ಸ್ ಪ್ರಶಸ್ತಿಗೆ ಭಾಜನರಾದ ಮೂವರಲ್ಲಿ ಬಂಧಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಒಬ್ಬರಾಗಿದ್ದಾರೆ.

ಪ್ರಖ್ಯಾತ ಬ್ರಿಟಿಷ್ ಮಾನವ ಹಕ್ಕುಗಳ ಕಾರ್ಯಕರ್ತನ ಹೆಸರಿನ ಈ ಪ್ರಶಸ್ತಿಯನ್ನು “ಮಾನವ ಹಕ್ಕುಗಳಿಗಾಗಿ ದುಡಿಯುವ ಅತ್ಯುತ್ತಮ ಕಾರ್ಯಕರ್ತರನ್ನು” ಗುರುತಿಸಿ ನೀಡಲಾಗುತ್ತದೆ. ಮಾನವ ಹಕ್ಕುಗಳ ವಕೀಲ ಡೆಲ್ಫಿನ್ ಜಿರೈಬೆ, ಆರೋಗ್ಯ ಹಕ್ಕುಗಳ ಕಾರ್ಯಕರ್ತ ಫೆಲಿಸಿಯಾನೊ ರೆಯ್ನಾ ಅವರಿಗೆ ಈ ಪ್ರಶಸ್ತಿ ದೊರತಿದೆ.

ವಿಶ್ವದ ಪ್ರಮುಖ ಮಾನವ ಹಕ್ಕುಗಳ 10 ಎನ್‌ಜಿಒಗಳ ತೀರ್ಪುಗಾರರಿಂದ ಮೂವರನ್ನು ಆಯ್ಕೆ ಮಾಡಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಹ್ಯೂಮನ್ ರೈಟ್ಸ್ ವಾಚ್, ಇಂಟರ್‌ನ್ಯಾಶನಲ್ ಫೆಡರೇಶನ್ ಫಾರ್ ಹ್ಯೂಮನ್ ರೈಟ್ಸ್, ಹ್ಯುರಿಡಾಕ್ಸ್, ಬ್ರೆಡ್ ಫಾರ್ ದಿ ವರ್ಲ್ಡ್, ಹ್ಯೂಮನ್ ರೈಟ್ಸ್ ಫಸ್ಟ್, ವರ್ಲ್ಡ್ ಆರ್ಗನೈಸೇಶನ್ ಎಗೇನ್ಸ್ಟ್ ಟಾರ್ಚರ್, ಇಂಟರ್‌ನ್ಯಾಶನಲ್ ಕಮಿಷನ್ ಆಫ್ ಜ್ಯೂರಿಸ್ಟ್, ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸೇವೆ ಮತ್ತು ಫ್ರಂಟ್ ಲೈನ್ ಡಿಫೆಂಡರ್ಸ್ ಸಂಸ್ಥೆಗಳ ತೀರ್ಪುಗಾರರು ಇದರಲ್ಲಿದ್ದರು.

“2023ರ ಪ್ರಶಸ್ತಿ ವಿಜೇತರ ನಡುವಿನ ಸಾಮಾನ್ಯ ಅಂಶವೆಂದರೆ- ಧೈರ್ಯ, ಉತ್ಸಾಹ ಮತ್ತು ದನಿಯಿಲ್ಲದವರ ಧ್ವನಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರುವ ಸಂಕಲ್ಪ. ಕೆಲವೊಮ್ಮೆ ಅವರು ಜೀವದ ಹಂಗು ತೊರೆದು ಹೋರಾಡುತ್ತಾರೆ, ಸವಾಲುಗಳನ್ನು ಸಹಿಸಿಕೊಳ್ಳುತ್ತಾರೆ” ಎಂದು ಪ್ರಶಸ್ತಿಯ ತೀರ್ಪುಗಾರರ ಅಧ್ಯಕ್ಷರಾದ ಹ್ಯಾನ್ಸ್ ಥೂಲೆನ್ ಹೇಳಿದ್ದಾರೆ.

ಪ್ರಶಸ್ತಿಗಳ ಅಧಿಕೃತ ಹೇಳಿಕೆಯಲ್ಲಿ ಖುರ್ರಂ ಪರ್ವೇಜ್ ಅವರ ಪರಿಚಯವು ಪತ್ರಕರ್ತೆ ರಾಣಾ ಅಯೂಬ್ ಅವರ ಅಭಿಪ್ರಾಯವನ್ನು ಹೊಂದಿದೆ. “ಬಲವಂತದ ನಾಪತ್ತೆಗಳಿಂದಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಧ್ವನಿ ನೀಡಿದ ಆಧುನಿಕ ಡೇವಿಡ್ ಈ ಪರ್ವೇಜ್” ಎಂದು ರಾಣಾ ಅಯೂಬ್‌ ಹೇಳಿದ್ದಾರೆ.

“ಚಿಕ್ಕ ಹುಡುಗನಾಗಿದ್ದಾಗ ಪ್ರತಿಭಟನೆಯೊಂದರಲ್ಲಿ ತನ್ನ ಅಜ್ಜ ದುರಂತ ಗುಂಡಿನ ದಾಳಿಯಿಂದ ಸತ್ತಿದ್ದನ್ನು ಪರ್ವೇಜ್‌ ಕಂಡರು. ಅವರು ಸೇಡು ತೀರಿಸಿಕೊಳ್ಳಬಹುದಿತ್ತು, ಬದಲಿಗೆ ಮಿಲಿಟರಿ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿಂಸಾತ್ಮಕ ಹೋರಾಟಕ್ಕೆ ಮುಂದಾದರು” ಎಂದಿದ್ದಾರೆ.

ಪರ್ವೇಜ್ ಅವರು ‘ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ನಾಗರಿಕ ಸಮಾಜ’ದ (JKCCS) ಸಂಸ್ಥಾಪಕ ಮತ್ತು ಕಾರ್ಯಕ್ರಮ ಸಂಯೋಜಕರಾಗಿದ್ದಾರೆ. ಸಾಮೂಹಿಕ ಕಣ್ಮರೆಗಳ ವಿರುದ್ಧ ಕೆಲಸ ಮಾಡುವ 10 ಏಷ್ಯನ್‌ ರಾಷ್ಟ್ರಗಳ 13 ಸರ್ಕಾರೇತರ ಸಂಸ್ಥೆಗಳ ಏಷ್ಯನ್ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ.

ನವೆಂಬರ್ 22, 2021 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರ್ವೇಜ್ ಅವರನ್ನು ಬಂಧಿಸಿತು. ಭಾರತೀಯ ದಂಡ ಸಂಹಿತೆ (IPC) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA) ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ ನಂತರ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...