Homeಮುಖಪುಟಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

ಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

- Advertisement -
- Advertisement -

ಹೊಸದಿಲ್ಲಿ: 2023ರ ಮಾರ್ಟಿನ್ ಎನ್ನಲ್ಸ್ ಪ್ರಶಸ್ತಿಗೆ ಭಾಜನರಾದ ಮೂವರಲ್ಲಿ ಬಂಧಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಒಬ್ಬರಾಗಿದ್ದಾರೆ.

ಪ್ರಖ್ಯಾತ ಬ್ರಿಟಿಷ್ ಮಾನವ ಹಕ್ಕುಗಳ ಕಾರ್ಯಕರ್ತನ ಹೆಸರಿನ ಈ ಪ್ರಶಸ್ತಿಯನ್ನು “ಮಾನವ ಹಕ್ಕುಗಳಿಗಾಗಿ ದುಡಿಯುವ ಅತ್ಯುತ್ತಮ ಕಾರ್ಯಕರ್ತರನ್ನು” ಗುರುತಿಸಿ ನೀಡಲಾಗುತ್ತದೆ. ಮಾನವ ಹಕ್ಕುಗಳ ವಕೀಲ ಡೆಲ್ಫಿನ್ ಜಿರೈಬೆ, ಆರೋಗ್ಯ ಹಕ್ಕುಗಳ ಕಾರ್ಯಕರ್ತ ಫೆಲಿಸಿಯಾನೊ ರೆಯ್ನಾ ಅವರಿಗೆ ಈ ಪ್ರಶಸ್ತಿ ದೊರತಿದೆ.

ವಿಶ್ವದ ಪ್ರಮುಖ ಮಾನವ ಹಕ್ಕುಗಳ 10 ಎನ್‌ಜಿಒಗಳ ತೀರ್ಪುಗಾರರಿಂದ ಮೂವರನ್ನು ಆಯ್ಕೆ ಮಾಡಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಹ್ಯೂಮನ್ ರೈಟ್ಸ್ ವಾಚ್, ಇಂಟರ್‌ನ್ಯಾಶನಲ್ ಫೆಡರೇಶನ್ ಫಾರ್ ಹ್ಯೂಮನ್ ರೈಟ್ಸ್, ಹ್ಯುರಿಡಾಕ್ಸ್, ಬ್ರೆಡ್ ಫಾರ್ ದಿ ವರ್ಲ್ಡ್, ಹ್ಯೂಮನ್ ರೈಟ್ಸ್ ಫಸ್ಟ್, ವರ್ಲ್ಡ್ ಆರ್ಗನೈಸೇಶನ್ ಎಗೇನ್ಸ್ಟ್ ಟಾರ್ಚರ್, ಇಂಟರ್‌ನ್ಯಾಶನಲ್ ಕಮಿಷನ್ ಆಫ್ ಜ್ಯೂರಿಸ್ಟ್, ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸೇವೆ ಮತ್ತು ಫ್ರಂಟ್ ಲೈನ್ ಡಿಫೆಂಡರ್ಸ್ ಸಂಸ್ಥೆಗಳ ತೀರ್ಪುಗಾರರು ಇದರಲ್ಲಿದ್ದರು.

“2023ರ ಪ್ರಶಸ್ತಿ ವಿಜೇತರ ನಡುವಿನ ಸಾಮಾನ್ಯ ಅಂಶವೆಂದರೆ- ಧೈರ್ಯ, ಉತ್ಸಾಹ ಮತ್ತು ದನಿಯಿಲ್ಲದವರ ಧ್ವನಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರುವ ಸಂಕಲ್ಪ. ಕೆಲವೊಮ್ಮೆ ಅವರು ಜೀವದ ಹಂಗು ತೊರೆದು ಹೋರಾಡುತ್ತಾರೆ, ಸವಾಲುಗಳನ್ನು ಸಹಿಸಿಕೊಳ್ಳುತ್ತಾರೆ” ಎಂದು ಪ್ರಶಸ್ತಿಯ ತೀರ್ಪುಗಾರರ ಅಧ್ಯಕ್ಷರಾದ ಹ್ಯಾನ್ಸ್ ಥೂಲೆನ್ ಹೇಳಿದ್ದಾರೆ.

ಪ್ರಶಸ್ತಿಗಳ ಅಧಿಕೃತ ಹೇಳಿಕೆಯಲ್ಲಿ ಖುರ್ರಂ ಪರ್ವೇಜ್ ಅವರ ಪರಿಚಯವು ಪತ್ರಕರ್ತೆ ರಾಣಾ ಅಯೂಬ್ ಅವರ ಅಭಿಪ್ರಾಯವನ್ನು ಹೊಂದಿದೆ. “ಬಲವಂತದ ನಾಪತ್ತೆಗಳಿಂದಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಧ್ವನಿ ನೀಡಿದ ಆಧುನಿಕ ಡೇವಿಡ್ ಈ ಪರ್ವೇಜ್” ಎಂದು ರಾಣಾ ಅಯೂಬ್‌ ಹೇಳಿದ್ದಾರೆ.

“ಚಿಕ್ಕ ಹುಡುಗನಾಗಿದ್ದಾಗ ಪ್ರತಿಭಟನೆಯೊಂದರಲ್ಲಿ ತನ್ನ ಅಜ್ಜ ದುರಂತ ಗುಂಡಿನ ದಾಳಿಯಿಂದ ಸತ್ತಿದ್ದನ್ನು ಪರ್ವೇಜ್‌ ಕಂಡರು. ಅವರು ಸೇಡು ತೀರಿಸಿಕೊಳ್ಳಬಹುದಿತ್ತು, ಬದಲಿಗೆ ಮಿಲಿಟರಿ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿಂಸಾತ್ಮಕ ಹೋರಾಟಕ್ಕೆ ಮುಂದಾದರು” ಎಂದಿದ್ದಾರೆ.

ಪರ್ವೇಜ್ ಅವರು ‘ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ನಾಗರಿಕ ಸಮಾಜ’ದ (JKCCS) ಸಂಸ್ಥಾಪಕ ಮತ್ತು ಕಾರ್ಯಕ್ರಮ ಸಂಯೋಜಕರಾಗಿದ್ದಾರೆ. ಸಾಮೂಹಿಕ ಕಣ್ಮರೆಗಳ ವಿರುದ್ಧ ಕೆಲಸ ಮಾಡುವ 10 ಏಷ್ಯನ್‌ ರಾಷ್ಟ್ರಗಳ 13 ಸರ್ಕಾರೇತರ ಸಂಸ್ಥೆಗಳ ಏಷ್ಯನ್ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ.

ನವೆಂಬರ್ 22, 2021 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರ್ವೇಜ್ ಅವರನ್ನು ಬಂಧಿಸಿತು. ಭಾರತೀಯ ದಂಡ ಸಂಹಿತೆ (IPC) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA) ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ ನಂತರ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...