Homeಮುಖಪುಟಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

ಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

- Advertisement -
- Advertisement -

ಹೊಸದಿಲ್ಲಿ: 2023ರ ಮಾರ್ಟಿನ್ ಎನ್ನಲ್ಸ್ ಪ್ರಶಸ್ತಿಗೆ ಭಾಜನರಾದ ಮೂವರಲ್ಲಿ ಬಂಧಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಒಬ್ಬರಾಗಿದ್ದಾರೆ.

ಪ್ರಖ್ಯಾತ ಬ್ರಿಟಿಷ್ ಮಾನವ ಹಕ್ಕುಗಳ ಕಾರ್ಯಕರ್ತನ ಹೆಸರಿನ ಈ ಪ್ರಶಸ್ತಿಯನ್ನು “ಮಾನವ ಹಕ್ಕುಗಳಿಗಾಗಿ ದುಡಿಯುವ ಅತ್ಯುತ್ತಮ ಕಾರ್ಯಕರ್ತರನ್ನು” ಗುರುತಿಸಿ ನೀಡಲಾಗುತ್ತದೆ. ಮಾನವ ಹಕ್ಕುಗಳ ವಕೀಲ ಡೆಲ್ಫಿನ್ ಜಿರೈಬೆ, ಆರೋಗ್ಯ ಹಕ್ಕುಗಳ ಕಾರ್ಯಕರ್ತ ಫೆಲಿಸಿಯಾನೊ ರೆಯ್ನಾ ಅವರಿಗೆ ಈ ಪ್ರಶಸ್ತಿ ದೊರತಿದೆ.

ವಿಶ್ವದ ಪ್ರಮುಖ ಮಾನವ ಹಕ್ಕುಗಳ 10 ಎನ್‌ಜಿಒಗಳ ತೀರ್ಪುಗಾರರಿಂದ ಮೂವರನ್ನು ಆಯ್ಕೆ ಮಾಡಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಹ್ಯೂಮನ್ ರೈಟ್ಸ್ ವಾಚ್, ಇಂಟರ್‌ನ್ಯಾಶನಲ್ ಫೆಡರೇಶನ್ ಫಾರ್ ಹ್ಯೂಮನ್ ರೈಟ್ಸ್, ಹ್ಯುರಿಡಾಕ್ಸ್, ಬ್ರೆಡ್ ಫಾರ್ ದಿ ವರ್ಲ್ಡ್, ಹ್ಯೂಮನ್ ರೈಟ್ಸ್ ಫಸ್ಟ್, ವರ್ಲ್ಡ್ ಆರ್ಗನೈಸೇಶನ್ ಎಗೇನ್ಸ್ಟ್ ಟಾರ್ಚರ್, ಇಂಟರ್‌ನ್ಯಾಶನಲ್ ಕಮಿಷನ್ ಆಫ್ ಜ್ಯೂರಿಸ್ಟ್, ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸೇವೆ ಮತ್ತು ಫ್ರಂಟ್ ಲೈನ್ ಡಿಫೆಂಡರ್ಸ್ ಸಂಸ್ಥೆಗಳ ತೀರ್ಪುಗಾರರು ಇದರಲ್ಲಿದ್ದರು.

“2023ರ ಪ್ರಶಸ್ತಿ ವಿಜೇತರ ನಡುವಿನ ಸಾಮಾನ್ಯ ಅಂಶವೆಂದರೆ- ಧೈರ್ಯ, ಉತ್ಸಾಹ ಮತ್ತು ದನಿಯಿಲ್ಲದವರ ಧ್ವನಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರುವ ಸಂಕಲ್ಪ. ಕೆಲವೊಮ್ಮೆ ಅವರು ಜೀವದ ಹಂಗು ತೊರೆದು ಹೋರಾಡುತ್ತಾರೆ, ಸವಾಲುಗಳನ್ನು ಸಹಿಸಿಕೊಳ್ಳುತ್ತಾರೆ” ಎಂದು ಪ್ರಶಸ್ತಿಯ ತೀರ್ಪುಗಾರರ ಅಧ್ಯಕ್ಷರಾದ ಹ್ಯಾನ್ಸ್ ಥೂಲೆನ್ ಹೇಳಿದ್ದಾರೆ.

ಪ್ರಶಸ್ತಿಗಳ ಅಧಿಕೃತ ಹೇಳಿಕೆಯಲ್ಲಿ ಖುರ್ರಂ ಪರ್ವೇಜ್ ಅವರ ಪರಿಚಯವು ಪತ್ರಕರ್ತೆ ರಾಣಾ ಅಯೂಬ್ ಅವರ ಅಭಿಪ್ರಾಯವನ್ನು ಹೊಂದಿದೆ. “ಬಲವಂತದ ನಾಪತ್ತೆಗಳಿಂದಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಧ್ವನಿ ನೀಡಿದ ಆಧುನಿಕ ಡೇವಿಡ್ ಈ ಪರ್ವೇಜ್” ಎಂದು ರಾಣಾ ಅಯೂಬ್‌ ಹೇಳಿದ್ದಾರೆ.

“ಚಿಕ್ಕ ಹುಡುಗನಾಗಿದ್ದಾಗ ಪ್ರತಿಭಟನೆಯೊಂದರಲ್ಲಿ ತನ್ನ ಅಜ್ಜ ದುರಂತ ಗುಂಡಿನ ದಾಳಿಯಿಂದ ಸತ್ತಿದ್ದನ್ನು ಪರ್ವೇಜ್‌ ಕಂಡರು. ಅವರು ಸೇಡು ತೀರಿಸಿಕೊಳ್ಳಬಹುದಿತ್ತು, ಬದಲಿಗೆ ಮಿಲಿಟರಿ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿಂಸಾತ್ಮಕ ಹೋರಾಟಕ್ಕೆ ಮುಂದಾದರು” ಎಂದಿದ್ದಾರೆ.

ಪರ್ವೇಜ್ ಅವರು ‘ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ನಾಗರಿಕ ಸಮಾಜ’ದ (JKCCS) ಸಂಸ್ಥಾಪಕ ಮತ್ತು ಕಾರ್ಯಕ್ರಮ ಸಂಯೋಜಕರಾಗಿದ್ದಾರೆ. ಸಾಮೂಹಿಕ ಕಣ್ಮರೆಗಳ ವಿರುದ್ಧ ಕೆಲಸ ಮಾಡುವ 10 ಏಷ್ಯನ್‌ ರಾಷ್ಟ್ರಗಳ 13 ಸರ್ಕಾರೇತರ ಸಂಸ್ಥೆಗಳ ಏಷ್ಯನ್ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ.

ನವೆಂಬರ್ 22, 2021 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರ್ವೇಜ್ ಅವರನ್ನು ಬಂಧಿಸಿತು. ಭಾರತೀಯ ದಂಡ ಸಂಹಿತೆ (IPC) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA) ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ ನಂತರ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...