Homeಮುಖಪುಟಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

ಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

- Advertisement -
- Advertisement -

ಹೊಸದಿಲ್ಲಿ: 2023ರ ಮಾರ್ಟಿನ್ ಎನ್ನಲ್ಸ್ ಪ್ರಶಸ್ತಿಗೆ ಭಾಜನರಾದ ಮೂವರಲ್ಲಿ ಬಂಧಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಒಬ್ಬರಾಗಿದ್ದಾರೆ.

ಪ್ರಖ್ಯಾತ ಬ್ರಿಟಿಷ್ ಮಾನವ ಹಕ್ಕುಗಳ ಕಾರ್ಯಕರ್ತನ ಹೆಸರಿನ ಈ ಪ್ರಶಸ್ತಿಯನ್ನು “ಮಾನವ ಹಕ್ಕುಗಳಿಗಾಗಿ ದುಡಿಯುವ ಅತ್ಯುತ್ತಮ ಕಾರ್ಯಕರ್ತರನ್ನು” ಗುರುತಿಸಿ ನೀಡಲಾಗುತ್ತದೆ. ಮಾನವ ಹಕ್ಕುಗಳ ವಕೀಲ ಡೆಲ್ಫಿನ್ ಜಿರೈಬೆ, ಆರೋಗ್ಯ ಹಕ್ಕುಗಳ ಕಾರ್ಯಕರ್ತ ಫೆಲಿಸಿಯಾನೊ ರೆಯ್ನಾ ಅವರಿಗೆ ಈ ಪ್ರಶಸ್ತಿ ದೊರತಿದೆ.

ವಿಶ್ವದ ಪ್ರಮುಖ ಮಾನವ ಹಕ್ಕುಗಳ 10 ಎನ್‌ಜಿಒಗಳ ತೀರ್ಪುಗಾರರಿಂದ ಮೂವರನ್ನು ಆಯ್ಕೆ ಮಾಡಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಹ್ಯೂಮನ್ ರೈಟ್ಸ್ ವಾಚ್, ಇಂಟರ್‌ನ್ಯಾಶನಲ್ ಫೆಡರೇಶನ್ ಫಾರ್ ಹ್ಯೂಮನ್ ರೈಟ್ಸ್, ಹ್ಯುರಿಡಾಕ್ಸ್, ಬ್ರೆಡ್ ಫಾರ್ ದಿ ವರ್ಲ್ಡ್, ಹ್ಯೂಮನ್ ರೈಟ್ಸ್ ಫಸ್ಟ್, ವರ್ಲ್ಡ್ ಆರ್ಗನೈಸೇಶನ್ ಎಗೇನ್ಸ್ಟ್ ಟಾರ್ಚರ್, ಇಂಟರ್‌ನ್ಯಾಶನಲ್ ಕಮಿಷನ್ ಆಫ್ ಜ್ಯೂರಿಸ್ಟ್, ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸೇವೆ ಮತ್ತು ಫ್ರಂಟ್ ಲೈನ್ ಡಿಫೆಂಡರ್ಸ್ ಸಂಸ್ಥೆಗಳ ತೀರ್ಪುಗಾರರು ಇದರಲ್ಲಿದ್ದರು.

“2023ರ ಪ್ರಶಸ್ತಿ ವಿಜೇತರ ನಡುವಿನ ಸಾಮಾನ್ಯ ಅಂಶವೆಂದರೆ- ಧೈರ್ಯ, ಉತ್ಸಾಹ ಮತ್ತು ದನಿಯಿಲ್ಲದವರ ಧ್ವನಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರುವ ಸಂಕಲ್ಪ. ಕೆಲವೊಮ್ಮೆ ಅವರು ಜೀವದ ಹಂಗು ತೊರೆದು ಹೋರಾಡುತ್ತಾರೆ, ಸವಾಲುಗಳನ್ನು ಸಹಿಸಿಕೊಳ್ಳುತ್ತಾರೆ” ಎಂದು ಪ್ರಶಸ್ತಿಯ ತೀರ್ಪುಗಾರರ ಅಧ್ಯಕ್ಷರಾದ ಹ್ಯಾನ್ಸ್ ಥೂಲೆನ್ ಹೇಳಿದ್ದಾರೆ.

ಪ್ರಶಸ್ತಿಗಳ ಅಧಿಕೃತ ಹೇಳಿಕೆಯಲ್ಲಿ ಖುರ್ರಂ ಪರ್ವೇಜ್ ಅವರ ಪರಿಚಯವು ಪತ್ರಕರ್ತೆ ರಾಣಾ ಅಯೂಬ್ ಅವರ ಅಭಿಪ್ರಾಯವನ್ನು ಹೊಂದಿದೆ. “ಬಲವಂತದ ನಾಪತ್ತೆಗಳಿಂದಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಧ್ವನಿ ನೀಡಿದ ಆಧುನಿಕ ಡೇವಿಡ್ ಈ ಪರ್ವೇಜ್” ಎಂದು ರಾಣಾ ಅಯೂಬ್‌ ಹೇಳಿದ್ದಾರೆ.

“ಚಿಕ್ಕ ಹುಡುಗನಾಗಿದ್ದಾಗ ಪ್ರತಿಭಟನೆಯೊಂದರಲ್ಲಿ ತನ್ನ ಅಜ್ಜ ದುರಂತ ಗುಂಡಿನ ದಾಳಿಯಿಂದ ಸತ್ತಿದ್ದನ್ನು ಪರ್ವೇಜ್‌ ಕಂಡರು. ಅವರು ಸೇಡು ತೀರಿಸಿಕೊಳ್ಳಬಹುದಿತ್ತು, ಬದಲಿಗೆ ಮಿಲಿಟರಿ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿಂಸಾತ್ಮಕ ಹೋರಾಟಕ್ಕೆ ಮುಂದಾದರು” ಎಂದಿದ್ದಾರೆ.

ಪರ್ವೇಜ್ ಅವರು ‘ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ನಾಗರಿಕ ಸಮಾಜ’ದ (JKCCS) ಸಂಸ್ಥಾಪಕ ಮತ್ತು ಕಾರ್ಯಕ್ರಮ ಸಂಯೋಜಕರಾಗಿದ್ದಾರೆ. ಸಾಮೂಹಿಕ ಕಣ್ಮರೆಗಳ ವಿರುದ್ಧ ಕೆಲಸ ಮಾಡುವ 10 ಏಷ್ಯನ್‌ ರಾಷ್ಟ್ರಗಳ 13 ಸರ್ಕಾರೇತರ ಸಂಸ್ಥೆಗಳ ಏಷ್ಯನ್ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ.

ನವೆಂಬರ್ 22, 2021 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರ್ವೇಜ್ ಅವರನ್ನು ಬಂಧಿಸಿತು. ಭಾರತೀಯ ದಂಡ ಸಂಹಿತೆ (IPC) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA) ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ ನಂತರ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...