Homeಮುಖಪುಟಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

ಮಾನವ ಹಕ್ಕುಗಳ ಹೋರಾಟಗಾರ ಕಾಶ್ಮೀರದ ಪರ್ವೇಜ್‌ಗೆ ಪ್ರತಿಷ್ಟಿತ ಮಾರ್ಟಿನ್ ಎನ್ನಲ್ಸ್‌ ಪ್ರಶಸ್ತಿ

- Advertisement -
- Advertisement -

ಹೊಸದಿಲ್ಲಿ: 2023ರ ಮಾರ್ಟಿನ್ ಎನ್ನಲ್ಸ್ ಪ್ರಶಸ್ತಿಗೆ ಭಾಜನರಾದ ಮೂವರಲ್ಲಿ ಬಂಧಿತ ಕಾಶ್ಮೀರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಒಬ್ಬರಾಗಿದ್ದಾರೆ.

ಪ್ರಖ್ಯಾತ ಬ್ರಿಟಿಷ್ ಮಾನವ ಹಕ್ಕುಗಳ ಕಾರ್ಯಕರ್ತನ ಹೆಸರಿನ ಈ ಪ್ರಶಸ್ತಿಯನ್ನು “ಮಾನವ ಹಕ್ಕುಗಳಿಗಾಗಿ ದುಡಿಯುವ ಅತ್ಯುತ್ತಮ ಕಾರ್ಯಕರ್ತರನ್ನು” ಗುರುತಿಸಿ ನೀಡಲಾಗುತ್ತದೆ. ಮಾನವ ಹಕ್ಕುಗಳ ವಕೀಲ ಡೆಲ್ಫಿನ್ ಜಿರೈಬೆ, ಆರೋಗ್ಯ ಹಕ್ಕುಗಳ ಕಾರ್ಯಕರ್ತ ಫೆಲಿಸಿಯಾನೊ ರೆಯ್ನಾ ಅವರಿಗೆ ಈ ಪ್ರಶಸ್ತಿ ದೊರತಿದೆ.

ವಿಶ್ವದ ಪ್ರಮುಖ ಮಾನವ ಹಕ್ಕುಗಳ 10 ಎನ್‌ಜಿಒಗಳ ತೀರ್ಪುಗಾರರಿಂದ ಮೂವರನ್ನು ಆಯ್ಕೆ ಮಾಡಲಾಗಿದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್, ಹ್ಯೂಮನ್ ರೈಟ್ಸ್ ವಾಚ್, ಇಂಟರ್‌ನ್ಯಾಶನಲ್ ಫೆಡರೇಶನ್ ಫಾರ್ ಹ್ಯೂಮನ್ ರೈಟ್ಸ್, ಹ್ಯುರಿಡಾಕ್ಸ್, ಬ್ರೆಡ್ ಫಾರ್ ದಿ ವರ್ಲ್ಡ್, ಹ್ಯೂಮನ್ ರೈಟ್ಸ್ ಫಸ್ಟ್, ವರ್ಲ್ಡ್ ಆರ್ಗನೈಸೇಶನ್ ಎಗೇನ್ಸ್ಟ್ ಟಾರ್ಚರ್, ಇಂಟರ್‌ನ್ಯಾಶನಲ್ ಕಮಿಷನ್ ಆಫ್ ಜ್ಯೂರಿಸ್ಟ್, ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸೇವೆ ಮತ್ತು ಫ್ರಂಟ್ ಲೈನ್ ಡಿಫೆಂಡರ್ಸ್ ಸಂಸ್ಥೆಗಳ ತೀರ್ಪುಗಾರರು ಇದರಲ್ಲಿದ್ದರು.

“2023ರ ಪ್ರಶಸ್ತಿ ವಿಜೇತರ ನಡುವಿನ ಸಾಮಾನ್ಯ ಅಂಶವೆಂದರೆ- ಧೈರ್ಯ, ಉತ್ಸಾಹ ಮತ್ತು ದನಿಯಿಲ್ಲದವರ ಧ್ವನಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತರುವ ಸಂಕಲ್ಪ. ಕೆಲವೊಮ್ಮೆ ಅವರು ಜೀವದ ಹಂಗು ತೊರೆದು ಹೋರಾಡುತ್ತಾರೆ, ಸವಾಲುಗಳನ್ನು ಸಹಿಸಿಕೊಳ್ಳುತ್ತಾರೆ” ಎಂದು ಪ್ರಶಸ್ತಿಯ ತೀರ್ಪುಗಾರರ ಅಧ್ಯಕ್ಷರಾದ ಹ್ಯಾನ್ಸ್ ಥೂಲೆನ್ ಹೇಳಿದ್ದಾರೆ.

ಪ್ರಶಸ್ತಿಗಳ ಅಧಿಕೃತ ಹೇಳಿಕೆಯಲ್ಲಿ ಖುರ್ರಂ ಪರ್ವೇಜ್ ಅವರ ಪರಿಚಯವು ಪತ್ರಕರ್ತೆ ರಾಣಾ ಅಯೂಬ್ ಅವರ ಅಭಿಪ್ರಾಯವನ್ನು ಹೊಂದಿದೆ. “ಬಲವಂತದ ನಾಪತ್ತೆಗಳಿಂದಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಧ್ವನಿ ನೀಡಿದ ಆಧುನಿಕ ಡೇವಿಡ್ ಈ ಪರ್ವೇಜ್” ಎಂದು ರಾಣಾ ಅಯೂಬ್‌ ಹೇಳಿದ್ದಾರೆ.

“ಚಿಕ್ಕ ಹುಡುಗನಾಗಿದ್ದಾಗ ಪ್ರತಿಭಟನೆಯೊಂದರಲ್ಲಿ ತನ್ನ ಅಜ್ಜ ದುರಂತ ಗುಂಡಿನ ದಾಳಿಯಿಂದ ಸತ್ತಿದ್ದನ್ನು ಪರ್ವೇಜ್‌ ಕಂಡರು. ಅವರು ಸೇಡು ತೀರಿಸಿಕೊಳ್ಳಬಹುದಿತ್ತು, ಬದಲಿಗೆ ಮಿಲಿಟರಿ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿಂಸಾತ್ಮಕ ಹೋರಾಟಕ್ಕೆ ಮುಂದಾದರು” ಎಂದಿದ್ದಾರೆ.

ಪರ್ವೇಜ್ ಅವರು ‘ಜಮ್ಮು ಮತ್ತು ಕಾಶ್ಮೀರ ಒಕ್ಕೂಟದ ನಾಗರಿಕ ಸಮಾಜ’ದ (JKCCS) ಸಂಸ್ಥಾಪಕ ಮತ್ತು ಕಾರ್ಯಕ್ರಮ ಸಂಯೋಜಕರಾಗಿದ್ದಾರೆ. ಸಾಮೂಹಿಕ ಕಣ್ಮರೆಗಳ ವಿರುದ್ಧ ಕೆಲಸ ಮಾಡುವ 10 ಏಷ್ಯನ್‌ ರಾಷ್ಟ್ರಗಳ 13 ಸರ್ಕಾರೇತರ ಸಂಸ್ಥೆಗಳ ಏಷ್ಯನ್ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ.

ನವೆಂಬರ್ 22, 2021 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪರ್ವೇಜ್ ಅವರನ್ನು ಬಂಧಿಸಿತು. ಭಾರತೀಯ ದಂಡ ಸಂಹಿತೆ (IPC) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ(UAPA) ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ ನಂತರ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...