HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...