HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...