HomeಮುಖಪುಟMSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

MSP ಉಲ್ಲಂಘಿಸಿದರೆ ಜೈಲು; ಹೊಸ ಪರ್ಯಾಯ ಮಸೂದೆ ಅಂಗೀಕರಿಸಿದ ಪಂಜಾಬ್!

ಹೊಸ ಮಸೂದೆಯ ಪ್ರಕಾರ, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಬಹುದು.

- Advertisement -
- Advertisement -

ಸಂಸತ್ತಿನಲ್ಲಿ ವಿರೋಧದ ಮಧ್ಯೆ ಕೇಂದ್ರ ಕಳೆದ ತಿಂಗಳು ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಂಜಾಬ್ ಪಾತ್ರವಾಗಿದೆ. ಇಂದು ರಾಜ್ಯದ ಅಸೆಂಬ್ಲಿಯಲ್ಲಿ, ಕೇಂದ್ರದ ಕಾನೂನುಗಳ ವಿರುದ್ಧದ 3 ಪರ್ಯಾಯ ಮಸೂದೆಯನ್ನು ರಾಜ್ಯವು ಅಂಗೀಕರಿಸಿತು.

ಕೇಂದ್ರ ಸರ್ಕಾರದ ಮಸೂದೆಗಳಿಗೆ ವಿರುದ್ಧವಾಗಿ ಪಂಜಾಬ್ ಸರ್ಕಾರ 3 ಪರ್ಯಾಯ ಮಸೂದೆಗಳನ್ನು ಪರಿಚಯಿಸಿದ್ದು, ಕನಿಷ್ಠ ಬೆಂಬಲ ಬೆಲೆಯನ್ನು (MSP) ಉಲ್ಲಂಘಿಸಿ, ಅದಕ್ಕಿಂತಲೂ ಕಡಿಮೆ ಬೆಲೆಗೆ ಗೋಧಿ ಅಥವಾ ಭತ್ತವನ್ನು ಖರೀದಿಸುವ/ಮಾರಾಟಮಾಡುವ ಯಾವುದೇ ವ್ಯಕ್ತಿಯ ಮೇಲೆ ದಂಡ ಮತ್ತು 3 ವರ್ಷ ಮೀರದಂತೆ ಶಿಕ್ಷೆ ವಿಧಿಸಲು ಇವುಗಳಲ್ಲಿ ಒಂದು ಮಸೂದೆ ಅವಕಾಶ ನಿಡುತ್ತದೆ.

ದೇಶದಾದ್ಯಂತ ಕೇಂದ್ರದ ಕಾನೂನುಗಳ ವಿಮರ್ಶಕರು ಉಲ್ಲೇಖಿಸಿದ್ದ ಪ್ರಮುಖ ಅಂಶಗಳಲ್ಲಿ MSPಯನ್ನು ತೆಗೆದುಹಾಗಲಾಗುತ್ತದೆ ಎಂಬುದು ಒಂದಾಗಿತ್ತು. ಬರಗಾಲ ಮತ್ತು ಬೆಳೆ ವೈಫಲ್ಯದಂತಹ ಕಠಿಣ ಕಾಲದಲ್ಲಿ ಸಾಲದ ಮೂಲವಾಗಿರುವ ಖಾತರಿಪಡಿಸಿದ ಮಾರಾಟದ ಬೆಲೆಗಳು ಮತ್ತು ಅದನ್ನು ತೆಗೆದುಹಾಕುವುದರಿಂದ ಸಣ್ಣ ಮತ್ತು ಅಲ್ಪ ರೈತರ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸರ್ಕಾರಿ ನಿಯಂತ್ರಿತ ಸಗಟು ಮಾರುಕಟ್ಟೆಯಲ್ಲಿ ಮಧ್ಯವರ್ತಿಗಿಂತ ಹೆಚ್ಚಾಗಿ ಸಾಂಸ್ಥಿಕ ಖರೀದಿದಾರರಿಗೆ ಮಾರಾಟ ಮಾಡಲು ರೈತರಿಗೆ ಅವಕಾಶ ನೀಡುವ ಕೇಂದ್ರದ ಕಾನೂನುಗಳಿಂದ ಖಾಸಗಿ ವ್ಯಕ್ತಿಗಳ ಪ್ರವೇಶವು ರೈತರ ಬೆಲೆ ನಿರ್ಣಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂದು ಕೇಂದ್ರದ ಕಾನೂನುಗಳ ವಿಮರ್ಶಕರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಇದು ಮಹತ್ವದ ಮಸೂದೆಯಾಗಿದೆ.

ಇದನ್ನೂ ಓದಿ: 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: ಖಾಸಗೀ ಶಾಲಾ ಶಿಕ್ಷಕನ ಬಂಧನ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಕೇಂದ್ರಬಿಂದುವಾಗಿ ಪಂಜಾಬ್ ಹೊರಹೊಮ್ಮಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ಪ್ರಮುಖ ಟ್ರಾಕ್ಟರ್ ರ್ಯಾಲಿಗಳನ್ನು ನಡೆಸಿದ್ದರು.

ಕಳೆದ ತಿಂಗಳು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೇಂದ್ರದ ಈ ಕಾನೂನುಗಳನ್ನು ಜಾರಿ ಮಾಡಬಾರದು ಎಂದು ಹೇಳಿದ್ದರು.

ಇಂದು ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕರಿಸಿದ ಮೂರು ಪರ್ಯಾಯ-ಮಸೂದೆಗಳು ಈಗ ಕಾನೂನು ಆಗುವ ಮೊದಲು ರಾಜ್ಯಪಾಲ ವಿ.ಪಿ.ಸಿಂಗ್ ಬದ್ನೋರ್ ಅವರ ಒಪ್ಪಿಗೆಯನ್ನು ಪಡೆಯುವ ಅಗತ್ಯವಿದೆ.

ಇದನ್ನೂ ಓದಿ: ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

MSPಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಪದೇ ಪದೇ ಭರವಸೆ ನೀಡಿದ್ದಾರೆ. ಆದರೆ ಈ ಮೌಖಿಕ ಆಶ್ವಾಸನೆಗಳು ರೈತರ ಕಳವಳವನ್ನು ಕಡಿಮೆ ಮಾಡಿಲ್ಲ.

ಇಂದು ಪಂಜಾಬ್ ಅಸೆಂಬ್ಲಿಯಿಂದ ಅಂಗೀಕಾರವಾದ ಮೂರು ಮಸೂದೆಗಳು ಇಂತಿವೆ;

  1. ರೈತರ ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆಯ ವಿಶೇಷ ನಿಬಂಧನೆಗಳು (ಪ್ರಚಾರ ಮತ್ತು ಸೌಲಭ್ಯ) ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.
  2. ಅಗತ್ಯ ಸರಕುಗಳು (ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ) ಮಸೂದೆ 2020, ಮತ್ತು
  3. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ರೈತ ಒಪ್ಪಂದ (ಸಬಲೀಕರಣ ಮತ್ತು ಸಂರಕ್ಷಣೆ) ವಿಶೇಷ ನಿಬಂಧನೆಗಳು ಮತ್ತು ಪಂಜಾಬ್ ತಿದ್ದುಪಡಿ ಮಸೂದೆ 2020.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...